ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm