ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm