ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm