ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm