ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.


ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm