ಬ್ರೇಕಿಂಗ್ ನ್ಯೂಸ್
03-10-21 04:06 pm Headline Karnataka News Network ಕರ್ನಾಟಕ
ಬೆಳಗಾವಿ, ಅ.3: ಅದೃಷ್ಟ ಇದ್ದಲ್ಲಿ ಪಾತಾಳಕ್ಕೆ ಬಿದ್ದರೂ, ಬದುಕಿ ಬರ್ತಾರೆ ಎನ್ನುವ ಮಾತಿದೆ. ಅದೇ ಮಾತಿನಂತೆ, ಇಲ್ಲೊಬ್ಬ ಯುವಕ ಪ್ರಪಾತವನ್ನೇ ಮೈವೆತ್ತಿ ನಿಂತ ಗೋಕಾಕ್ ಫಾಲ್ಸ್ ಮಧ್ಯೆ 140 ಅಡಿ ಕಂದಕಕ್ಕೆ ಬಿದ್ದರೂ ಪವಾಡ ಸದೃಶ ಬದುಕಿ ಬಂದಿದ್ದಾನೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್ನಲ್ಲಿ ಘಟನೆ ನಡೆದಿದ್ದು ಕಲ್ಲು ಬಂಡೆಗಳ ನಡುವೆ 140 ಅಡಿ ಕಂದಕಕ್ಕೆ ಬಿದ್ದರೂ ಯುವಕ ಬದುಕಿದ್ದು ಸ್ಥಳೀಯರಲ್ಲಿ ಅಚ್ಚರಿ ಸೃಷ್ಟಿಸಿದೆ.
ಬೆಳಗಾವಿ ಪೇಟೆಯಲ್ಲಿ ಬ್ಯಾಂಕ್ ನೌಕರನಾಗಿರುವ ಪ್ರದೀಪ ಸಾಗರ್ ಹೀಗೆ ದುರಂತದಲ್ಲಿ ಬದುಕಿ ಬಂದ ಯುವಕ. ಶನಿವಾರ ಸ್ನೇಹಿತರ ಜೊತೆಗೆ ಗೋಕಾಕ್ ಫಾಲ್ಸ್ ವೀಕ್ಷಣೆಗೆ ಬಂದಿದ್ದ ವೇಳೆ ಘಟನೆ ನಡೆದಿತ್ತು. ಕೂಡಲೇ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಗೋಕಾಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಾತ್ರಿ ವೇಳೆಯೇ ಕಾರ್ಯಾಚರಣೆ ನಡೆಸಿದ್ದಾರೆ.
ಆದರೆ, ರಾತ್ರಿ ಕತ್ತಲು ಕವಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಯುವಕನ ಮೇಲಿನ ಭರವಸೆಯೂ ಕ್ಷೀಣವಾಗಿತ್ತು. 140 ಅಡಿ ಆಳದ ಕಂದಕಕ್ಕೆ ಬಿದ್ದಿದ್ದ ಕಾರಣ ಯುವಕ ಪ್ರಜ್ಞೆ ಕಳೆದುಕೊಂಡಿದ್ದ. ಫೋನ್ ರಿಂಗ್ ಆಗ್ತಿದ್ರೂ ರಿಸಿವ್ ಮಾಡುತ್ತಿರಲಿಲ್ಲ. ಕಾರ್ಯಾಚರಣೆ ಸ್ಥಗಿತ ಆಗಿದ್ದರಿಂದ ಇಡೀ ರಾತ್ರಿ ಕಂದಕದಲ್ಲಿಯೇ ಉಳಿದಿದ್ದ ಪ್ರದೀಪ್ ಸಾಗರ್, ಬೆಳಗ್ಗೆ 4 ಗಂಟೆಗೆ ಪ್ರಜ್ಞೆ ಬಂದಾಗ ತಾನೇ ಸ್ನೇಹಿತರಿಗೆ ಫೋನ್ ಮಾಡಿದ್ದಾನೆ.
ಬಳಿಕ ಗೋಕಾಕದ ಸಾಮಾಜಿಕ ಕಾರ್ಯಕರ್ತ ಆಯೂಬ್ ಖಾನ್ ಹಾಗೂ ಪೊಲೀಸರು ಸೇರಿ ಪ್ರದೀಪನ ರಕ್ಷಣೆ ಮಾಡಿದ್ದಾರೆ. ಗೋಕಾಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಲೆಗೆ ಸಣ್ಣ ಪುಟ್ಟ ಗಾಯ ಆಗಿದ್ದು ಬಿಟ್ಟರೆ ಸುರಕ್ಷಿತವಾಗಿದ್ದಾನೆ. ಕಲ್ಲು ಬಂಡೆಗಳ ನಡುವೆ ಪ್ರಪಾತಕ್ಕೆ ಬಿದ್ದರೂ ಬದುಕಿ ಬಂದಿದ್ದು ಅಚ್ಚರಿಗೆ ಕಾರಣವಾಗಿದೆ.
Man survives after falling 140 feet tall from Gokak falls in Belagavi. He was rescued by the fire brigade team. He was found alive.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am