ಬ್ರೇಕಿಂಗ್ ನ್ಯೂಸ್
04-10-21 05:44 pm Headline Karnataka News Network ಕರ್ನಾಟಕ
ವಿಜಯಪುರ, ಅ.4: ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲಿಯೂ ಪ್ರಭಾವಿ ರಾಜಕಾರಣಿಗಳ ಮಕ್ಕಳು, ಸಿನಿಮಾ ನಟರು ಇದ್ದಾರೆ. ಅದೇ ಕಾರಣಕ್ಕೆ ಡ್ರಗ್ಸ್ ಕೇಸ್ ನಲ್ಲಿ ಸೀಮಿತ ತನಿಖೆ ನಡೆದಿದೆ. ಅರ್ಧಕ್ಕೆ ತನಿಖೆ ನಡೆಸಿ ಇಡೀ ಪ್ರಕರಣ ಮುಚ್ಚಿ ಹಾಕಿದ್ದಾರೆ. ಆಳವಾಗಿ ತನಿಖೆ ನಡೆದಿದ್ದರೆ ಕೈ ಶಾಸಕರ ಕೈವಾಡ ಬಯಲಿಗೆ ಬರ್ತಿತ್ತು. ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕರೂ ಇದ್ದರು, ಬಿಜೆಪಿಯ ಕೆಲವು ಶಾಸಕರ ಮಕ್ಕಳ ಹೆಸರೂ ಬಂದಿತ್ತು ಎಂದು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಭಯೋತ್ಪಾದನೆಯ ಒಂದು ಭಾಗವೇ ಆಗಿದೆ. ಬಾಲಿವುಡ್ ಸೇರಿದಂತೆ ನಮ್ಮ ಸಿನಿಮಾ ನಟರು ಡ್ರಗ್ಸ್ ಮಾಫಿಯಾದ ಭಾಗವಾಗಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಡ್ರಗ್ಸ್ ಮೂಲಕ ಹಿಂದೂ ಯುವಕರನ್ನ ಟಾರ್ಗೆಟ್ ಮಾಡಲಾಗಿದೆ. ಹಿಂದುಗಳನ್ನ ಡ್ರಗ್ಸ್ ಮಾಫಿಯಾಗೆ ಬಲಿ ಕೊಡಲಾಗ್ತಿದೆ. ಹಿಂದು ಯುವಕರ ಯೌವನವನ್ನು ಹಾಳು ಮಾಡಲಾಗ್ತಿದೆ. ಡ್ರಗ್ಸ್ ಮೂಲಕ ಹಿಂದುಗಳಲ್ಲಿ ನಪುಂಸಕತ್ವ ಹೆಚ್ಚಾಗಿ, ಹಿಂದುಗಳ ಜನಸಂಖ್ಯೆ ಕಡಿಮೆ ಮಾಡಬೇಕು ಎನ್ನುವ ಉದ್ದೇಶ ಇದರ ಹಿಂದಿದೆ. ಇಂಥ ಹಿಡನ್ ಅಜೆಂಡಾ ಇಟ್ಕೊಂಡು ದಂಧೆ ನಡೆಸುತ್ತಿದ್ದರೂ ನಮ್ಮ ಸರ್ಕಾರ ಇದ್ದೂ ಏನು ಮಾಡಲಾಗ್ತಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.


ಶಾರುಖ್ ಪುತ್ರ ಡ್ರಗ್ಸ್ ಪ್ರಕರಣದಲ್ಲಿ ಬಂಧನ ಆಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಖಾನ್ ಗಳ ಬಗ್ಗೆ ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ. ಖಾನ್ ಗಳಿಂದ ದೇಶ ಸುರಕ್ಷಿತ ಅಲ್ಲ. ಅವರು ದೇಶ ಬಿಡಲಿ. ಆ ಮಕ್ಕಳೆಲ್ಲ ನೇರವಾಗಿ ಅಫ್ಘಾನಿಸ್ತಾನಕ್ಕೆ ಹೋಗಲಿ. ಸುರಕ್ಷಿತವಾಗಿ ತಾಲಿಬಾನ್ ಕೈಕೆಳಗೆ ನಟನೆ ಮಾಡಿಕೊಂಡು ಇರಲಿ ಎಂದು ವ್ಯಂಗ್ಯವಾಡಿದ್ದಾರೆ.
ದೇಶದಲ್ಲಿ ಹಿಂದುಗಳು ಸಿನಿಮಾ ನೋಡುತ್ತಾರೆ. ಇವರು ಸಾವಿರಾರು ಕೋಟಿ ಗಳಿಕೆ ಮಾಡುತ್ತಾರೆ. ಅವರ ಮಕ್ಕಳೆಲ್ಲ ಮಜಾ ಮಾಡಿಕೊಂಡು ದೇಶದ ವ್ಯವಸ್ಥೆ ಕೆಡಿಸುತ್ತಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕ ಸ್ಥಿತಿ ಡ್ರಗ್ಸ್ ಮೇಲೆ ನಿಂತಿದೆ. ಡ್ರಗ್ಸ್ ಕಟ್ ಮಾಡಿದರೆ, ಭಯೋತ್ಪಾದನೆ ತಡೆಯಬಹುದು ಎಂದು ಯತ್ನಾಳ್ ಹೇಳಿದ್ದಾರೆ.
Congress and BJP leaders are involved in drugs case along with film stars sparks another controversial statement Basangouda Patil Yatnal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm