ಬ್ರೇಕಿಂಗ್ ನ್ಯೂಸ್
04-10-21 05:44 pm Headline Karnataka News Network ಕರ್ನಾಟಕ
ವಿಜಯಪುರ, ಅ.4: ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲಿಯೂ ಪ್ರಭಾವಿ ರಾಜಕಾರಣಿಗಳ ಮಕ್ಕಳು, ಸಿನಿಮಾ ನಟರು ಇದ್ದಾರೆ. ಅದೇ ಕಾರಣಕ್ಕೆ ಡ್ರಗ್ಸ್ ಕೇಸ್ ನಲ್ಲಿ ಸೀಮಿತ ತನಿಖೆ ನಡೆದಿದೆ. ಅರ್ಧಕ್ಕೆ ತನಿಖೆ ನಡೆಸಿ ಇಡೀ ಪ್ರಕರಣ ಮುಚ್ಚಿ ಹಾಕಿದ್ದಾರೆ. ಆಳವಾಗಿ ತನಿಖೆ ನಡೆದಿದ್ದರೆ ಕೈ ಶಾಸಕರ ಕೈವಾಡ ಬಯಲಿಗೆ ಬರ್ತಿತ್ತು. ಡ್ರಗ್ಸ್ ಕೇಸ್ ನಲ್ಲಿ ಕಾಂಗ್ರೆಸ್ ಶಾಸಕರೂ ಇದ್ದರು, ಬಿಜೆಪಿಯ ಕೆಲವು ಶಾಸಕರ ಮಕ್ಕಳ ಹೆಸರೂ ಬಂದಿತ್ತು ಎಂದು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಭಯೋತ್ಪಾದನೆಯ ಒಂದು ಭಾಗವೇ ಆಗಿದೆ. ಬಾಲಿವುಡ್ ಸೇರಿದಂತೆ ನಮ್ಮ ಸಿನಿಮಾ ನಟರು ಡ್ರಗ್ಸ್ ಮಾಫಿಯಾದ ಭಾಗವಾಗಿದ್ದಾರೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಡ್ರಗ್ಸ್ ಮೂಲಕ ಹಿಂದೂ ಯುವಕರನ್ನ ಟಾರ್ಗೆಟ್ ಮಾಡಲಾಗಿದೆ. ಹಿಂದುಗಳನ್ನ ಡ್ರಗ್ಸ್ ಮಾಫಿಯಾಗೆ ಬಲಿ ಕೊಡಲಾಗ್ತಿದೆ. ಹಿಂದು ಯುವಕರ ಯೌವನವನ್ನು ಹಾಳು ಮಾಡಲಾಗ್ತಿದೆ. ಡ್ರಗ್ಸ್ ಮೂಲಕ ಹಿಂದುಗಳಲ್ಲಿ ನಪುಂಸಕತ್ವ ಹೆಚ್ಚಾಗಿ, ಹಿಂದುಗಳ ಜನಸಂಖ್ಯೆ ಕಡಿಮೆ ಮಾಡಬೇಕು ಎನ್ನುವ ಉದ್ದೇಶ ಇದರ ಹಿಂದಿದೆ. ಇಂಥ ಹಿಡನ್ ಅಜೆಂಡಾ ಇಟ್ಕೊಂಡು ದಂಧೆ ನಡೆಸುತ್ತಿದ್ದರೂ ನಮ್ಮ ಸರ್ಕಾರ ಇದ್ದೂ ಏನು ಮಾಡಲಾಗ್ತಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.


ಶಾರುಖ್ ಪುತ್ರ ಡ್ರಗ್ಸ್ ಪ್ರಕರಣದಲ್ಲಿ ಬಂಧನ ಆಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಖಾನ್ ಗಳ ಬಗ್ಗೆ ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ. ಖಾನ್ ಗಳಿಂದ ದೇಶ ಸುರಕ್ಷಿತ ಅಲ್ಲ. ಅವರು ದೇಶ ಬಿಡಲಿ. ಆ ಮಕ್ಕಳೆಲ್ಲ ನೇರವಾಗಿ ಅಫ್ಘಾನಿಸ್ತಾನಕ್ಕೆ ಹೋಗಲಿ. ಸುರಕ್ಷಿತವಾಗಿ ತಾಲಿಬಾನ್ ಕೈಕೆಳಗೆ ನಟನೆ ಮಾಡಿಕೊಂಡು ಇರಲಿ ಎಂದು ವ್ಯಂಗ್ಯವಾಡಿದ್ದಾರೆ.
ದೇಶದಲ್ಲಿ ಹಿಂದುಗಳು ಸಿನಿಮಾ ನೋಡುತ್ತಾರೆ. ಇವರು ಸಾವಿರಾರು ಕೋಟಿ ಗಳಿಕೆ ಮಾಡುತ್ತಾರೆ. ಅವರ ಮಕ್ಕಳೆಲ್ಲ ಮಜಾ ಮಾಡಿಕೊಂಡು ದೇಶದ ವ್ಯವಸ್ಥೆ ಕೆಡಿಸುತ್ತಿದ್ದಾರೆ. ಅಫ್ಘಾನಿಸ್ತಾನದ ಆರ್ಥಿಕ ಸ್ಥಿತಿ ಡ್ರಗ್ಸ್ ಮೇಲೆ ನಿಂತಿದೆ. ಡ್ರಗ್ಸ್ ಕಟ್ ಮಾಡಿದರೆ, ಭಯೋತ್ಪಾದನೆ ತಡೆಯಬಹುದು ಎಂದು ಯತ್ನಾಳ್ ಹೇಳಿದ್ದಾರೆ.
Congress and BJP leaders are involved in drugs case along with film stars sparks another controversial statement Basangouda Patil Yatnal.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm