ಬ್ರೇಕಿಂಗ್ ನ್ಯೂಸ್
05-10-21 04:11 pm Mangaluru Correspondent ಕರ್ನಾಟಕ
ಹಾವೇರಿ, ಅ.5: ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರು ರಹಸ್ಯ ಸಭೆ ನಡೆಸಿದ್ದು ತಮ್ಮ ಸಮುದಾಯದ ಅಭ್ಯರ್ಥಿಗಳಿಗೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಒತ್ತಡ ಹೇರಿದ್ದಾರೆ. ಟಿಕೆಟ್ ಕೊಡದೇ ಇದ್ದರೆ, ಪಕ್ಷೇತರ ಅಭ್ಯರ್ಥಿ ನಿಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಭೆಯಲ್ಲಿ ಸಮಾಜದ ರಾಜಾದ್ಯಕ್ಷರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಪಂಚಮಸಾಲಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಈ ಸಾರಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಕೊಡಲೇ ಬೇಕು. ಇಲ್ಲವಾದರೆ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹಾನಗಲ್ ತಾಲೂಕಿನಲ್ಲಿ 62 ಸಾವಿರ ಮತಗಳು ನಮ್ಮ ವೀರಶೈವ ಲಿಂಗಾಯತ ಸಮಾಜದ್ದು ಇದೆ. ನಿಷ್ಠಾವಂತ ಪಂಚಮಸಾಲಿ ಸಮಾಜದ ಅಭ್ಯರ್ಥಿಗೆ ಮನ್ನಣೆ ನೀಡಬೇಕು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಮಾಜದಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು. ನಮ್ಮನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡುತ್ತೇವೆ. ಹೀಗಾಗಿ ನಾಳೆ ಒಂದು ದಿನ ಕಾದು ನೋಡುತ್ತೇವೆ. ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ಕೊಡದೇ ಇದ್ದರೆ, ವೀರಶೈವ ಸಮಾಜದ ವತಿಯಿಂದ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸೋದು ಖಚಿತ ಎಂದು ಬಸವರಾಜ್ ದಿಂಡೂರು ಎಚ್ಚರಿಕೆ ರವಾನಿಸಿದ್ದಾರೆ.
ಪಂಚಮಸಾಲಿ ಸಮಾಜದ ಮುಖಂಡರು ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬಂದಿದ್ದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನಿಸಿದೆ. ಮಾಜಿ ಶಾಸಕ ಸಿಎಂ ಉದಾಸಿ ಪತ್ನಿ ರೇವತಿ ಉದಾಸಿ ಸೇರಿದಂತೆ ಇತರ ಇಬ್ಬರ ಹೆಸರನ್ನೂ ಕೊಡಲಾಗಿದೆ. ಇದೇ ವೇಳೆ, ಉದಾಸಿ ಕುಟುಂಬಸ್ಥರಿಗೆ ಮತ್ತೆ ಟಿಕೆಟ್ ಕೊಡುವುದಕ್ಕೆ ಬಿಜೆಪಿಯಲ್ಲೇ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ವೀರಶೈವ ನಾಯಕರು ಈ ರೀತಿಯ ಬೇಡಿಕೆ ಮುಂದಿಟ್ಟಿದ್ದು ಉದಾಸಿ ಕುಟುಂಬಸ್ಥರಿಗಲ್ಲದೆ ಇತರ ಪಕ್ಷದಲ್ಲಿ ಕೆಲಸ ಮಾಡಿ ಬಂದವರಿಗೇ ಮಣೆ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡುವಂತಾಗಿದೆ.
The bypolls to Sindgi (Vijayapura) and Hangal (Haveri) assembly segments will be held on October 30, the Election Commission announced on Tuesday. The results will be declared on November 2. Veerashaiva lingayat asks for tickets by holding press meet.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm