ಬ್ರೇಕಿಂಗ್ ನ್ಯೂಸ್
05-10-21 04:11 pm Mangaluru Correspondent ಕರ್ನಾಟಕ
ಹಾವೇರಿ, ಅ.5: ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರು ರಹಸ್ಯ ಸಭೆ ನಡೆಸಿದ್ದು ತಮ್ಮ ಸಮುದಾಯದ ಅಭ್ಯರ್ಥಿಗಳಿಗೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಒತ್ತಡ ಹೇರಿದ್ದಾರೆ. ಟಿಕೆಟ್ ಕೊಡದೇ ಇದ್ದರೆ, ಪಕ್ಷೇತರ ಅಭ್ಯರ್ಥಿ ನಿಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಭೆಯಲ್ಲಿ ಸಮಾಜದ ರಾಜಾದ್ಯಕ್ಷರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಪಂಚಮಸಾಲಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಈ ಸಾರಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಕೊಡಲೇ ಬೇಕು. ಇಲ್ಲವಾದರೆ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹಾನಗಲ್ ತಾಲೂಕಿನಲ್ಲಿ 62 ಸಾವಿರ ಮತಗಳು ನಮ್ಮ ವೀರಶೈವ ಲಿಂಗಾಯತ ಸಮಾಜದ್ದು ಇದೆ. ನಿಷ್ಠಾವಂತ ಪಂಚಮಸಾಲಿ ಸಮಾಜದ ಅಭ್ಯರ್ಥಿಗೆ ಮನ್ನಣೆ ನೀಡಬೇಕು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಮಾಜದಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು. ನಮ್ಮನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡುತ್ತೇವೆ. ಹೀಗಾಗಿ ನಾಳೆ ಒಂದು ದಿನ ಕಾದು ನೋಡುತ್ತೇವೆ. ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ಕೊಡದೇ ಇದ್ದರೆ, ವೀರಶೈವ ಸಮಾಜದ ವತಿಯಿಂದ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸೋದು ಖಚಿತ ಎಂದು ಬಸವರಾಜ್ ದಿಂಡೂರು ಎಚ್ಚರಿಕೆ ರವಾನಿಸಿದ್ದಾರೆ.
ಪಂಚಮಸಾಲಿ ಸಮಾಜದ ಮುಖಂಡರು ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬಂದಿದ್ದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನಿಸಿದೆ. ಮಾಜಿ ಶಾಸಕ ಸಿಎಂ ಉದಾಸಿ ಪತ್ನಿ ರೇವತಿ ಉದಾಸಿ ಸೇರಿದಂತೆ ಇತರ ಇಬ್ಬರ ಹೆಸರನ್ನೂ ಕೊಡಲಾಗಿದೆ. ಇದೇ ವೇಳೆ, ಉದಾಸಿ ಕುಟುಂಬಸ್ಥರಿಗೆ ಮತ್ತೆ ಟಿಕೆಟ್ ಕೊಡುವುದಕ್ಕೆ ಬಿಜೆಪಿಯಲ್ಲೇ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ವೀರಶೈವ ನಾಯಕರು ಈ ರೀತಿಯ ಬೇಡಿಕೆ ಮುಂದಿಟ್ಟಿದ್ದು ಉದಾಸಿ ಕುಟುಂಬಸ್ಥರಿಗಲ್ಲದೆ ಇತರ ಪಕ್ಷದಲ್ಲಿ ಕೆಲಸ ಮಾಡಿ ಬಂದವರಿಗೇ ಮಣೆ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡುವಂತಾಗಿದೆ.
The bypolls to Sindgi (Vijayapura) and Hangal (Haveri) assembly segments will be held on October 30, the Election Commission announced on Tuesday. The results will be declared on November 2. Veerashaiva lingayat asks for tickets by holding press meet.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm