ಬ್ರೇಕಿಂಗ್ ನ್ಯೂಸ್
05-10-21 04:11 pm Mangaluru Correspondent ಕರ್ನಾಟಕ
ಹಾವೇರಿ, ಅ.5: ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರು ರಹಸ್ಯ ಸಭೆ ನಡೆಸಿದ್ದು ತಮ್ಮ ಸಮುದಾಯದ ಅಭ್ಯರ್ಥಿಗಳಿಗೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಒತ್ತಡ ಹೇರಿದ್ದಾರೆ. ಟಿಕೆಟ್ ಕೊಡದೇ ಇದ್ದರೆ, ಪಕ್ಷೇತರ ಅಭ್ಯರ್ಥಿ ನಿಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಭೆಯಲ್ಲಿ ಸಮಾಜದ ರಾಜಾದ್ಯಕ್ಷರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಪಂಚಮಸಾಲಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಈ ಸಾರಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಕೊಡಲೇ ಬೇಕು. ಇಲ್ಲವಾದರೆ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹಾನಗಲ್ ತಾಲೂಕಿನಲ್ಲಿ 62 ಸಾವಿರ ಮತಗಳು ನಮ್ಮ ವೀರಶೈವ ಲಿಂಗಾಯತ ಸಮಾಜದ್ದು ಇದೆ. ನಿಷ್ಠಾವಂತ ಪಂಚಮಸಾಲಿ ಸಮಾಜದ ಅಭ್ಯರ್ಥಿಗೆ ಮನ್ನಣೆ ನೀಡಬೇಕು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಮಾಜದಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು. ನಮ್ಮನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡುತ್ತೇವೆ. ಹೀಗಾಗಿ ನಾಳೆ ಒಂದು ದಿನ ಕಾದು ನೋಡುತ್ತೇವೆ. ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ಕೊಡದೇ ಇದ್ದರೆ, ವೀರಶೈವ ಸಮಾಜದ ವತಿಯಿಂದ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸೋದು ಖಚಿತ ಎಂದು ಬಸವರಾಜ್ ದಿಂಡೂರು ಎಚ್ಚರಿಕೆ ರವಾನಿಸಿದ್ದಾರೆ.
ಪಂಚಮಸಾಲಿ ಸಮಾಜದ ಮುಖಂಡರು ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬಂದಿದ್ದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನಿಸಿದೆ. ಮಾಜಿ ಶಾಸಕ ಸಿಎಂ ಉದಾಸಿ ಪತ್ನಿ ರೇವತಿ ಉದಾಸಿ ಸೇರಿದಂತೆ ಇತರ ಇಬ್ಬರ ಹೆಸರನ್ನೂ ಕೊಡಲಾಗಿದೆ. ಇದೇ ವೇಳೆ, ಉದಾಸಿ ಕುಟುಂಬಸ್ಥರಿಗೆ ಮತ್ತೆ ಟಿಕೆಟ್ ಕೊಡುವುದಕ್ಕೆ ಬಿಜೆಪಿಯಲ್ಲೇ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ವೀರಶೈವ ನಾಯಕರು ಈ ರೀತಿಯ ಬೇಡಿಕೆ ಮುಂದಿಟ್ಟಿದ್ದು ಉದಾಸಿ ಕುಟುಂಬಸ್ಥರಿಗಲ್ಲದೆ ಇತರ ಪಕ್ಷದಲ್ಲಿ ಕೆಲಸ ಮಾಡಿ ಬಂದವರಿಗೇ ಮಣೆ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡುವಂತಾಗಿದೆ.
The bypolls to Sindgi (Vijayapura) and Hangal (Haveri) assembly segments will be held on October 30, the Election Commission announced on Tuesday. The results will be declared on November 2. Veerashaiva lingayat asks for tickets by holding press meet.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm