ಬ್ರೇಕಿಂಗ್ ನ್ಯೂಸ್
05-10-21 04:11 pm Mangaluru Correspondent ಕರ್ನಾಟಕ
ಹಾವೇರಿ, ಅ.5: ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರು ರಹಸ್ಯ ಸಭೆ ನಡೆಸಿದ್ದು ತಮ್ಮ ಸಮುದಾಯದ ಅಭ್ಯರ್ಥಿಗಳಿಗೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಒತ್ತಡ ಹೇರಿದ್ದಾರೆ. ಟಿಕೆಟ್ ಕೊಡದೇ ಇದ್ದರೆ, ಪಕ್ಷೇತರ ಅಭ್ಯರ್ಥಿ ನಿಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಭೆಯಲ್ಲಿ ಸಮಾಜದ ರಾಜಾದ್ಯಕ್ಷರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಪಂಚಮಸಾಲಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಈ ಸಾರಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಕೊಡಲೇ ಬೇಕು. ಇಲ್ಲವಾದರೆ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹಾನಗಲ್ ತಾಲೂಕಿನಲ್ಲಿ 62 ಸಾವಿರ ಮತಗಳು ನಮ್ಮ ವೀರಶೈವ ಲಿಂಗಾಯತ ಸಮಾಜದ್ದು ಇದೆ. ನಿಷ್ಠಾವಂತ ಪಂಚಮಸಾಲಿ ಸಮಾಜದ ಅಭ್ಯರ್ಥಿಗೆ ಮನ್ನಣೆ ನೀಡಬೇಕು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಮಾಜದಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು. ನಮ್ಮನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡುತ್ತೇವೆ. ಹೀಗಾಗಿ ನಾಳೆ ಒಂದು ದಿನ ಕಾದು ನೋಡುತ್ತೇವೆ. ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ಕೊಡದೇ ಇದ್ದರೆ, ವೀರಶೈವ ಸಮಾಜದ ವತಿಯಿಂದ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸೋದು ಖಚಿತ ಎಂದು ಬಸವರಾಜ್ ದಿಂಡೂರು ಎಚ್ಚರಿಕೆ ರವಾನಿಸಿದ್ದಾರೆ.
ಪಂಚಮಸಾಲಿ ಸಮಾಜದ ಮುಖಂಡರು ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬಂದಿದ್ದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನಿಸಿದೆ. ಮಾಜಿ ಶಾಸಕ ಸಿಎಂ ಉದಾಸಿ ಪತ್ನಿ ರೇವತಿ ಉದಾಸಿ ಸೇರಿದಂತೆ ಇತರ ಇಬ್ಬರ ಹೆಸರನ್ನೂ ಕೊಡಲಾಗಿದೆ. ಇದೇ ವೇಳೆ, ಉದಾಸಿ ಕುಟುಂಬಸ್ಥರಿಗೆ ಮತ್ತೆ ಟಿಕೆಟ್ ಕೊಡುವುದಕ್ಕೆ ಬಿಜೆಪಿಯಲ್ಲೇ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ವೀರಶೈವ ನಾಯಕರು ಈ ರೀತಿಯ ಬೇಡಿಕೆ ಮುಂದಿಟ್ಟಿದ್ದು ಉದಾಸಿ ಕುಟುಂಬಸ್ಥರಿಗಲ್ಲದೆ ಇತರ ಪಕ್ಷದಲ್ಲಿ ಕೆಲಸ ಮಾಡಿ ಬಂದವರಿಗೇ ಮಣೆ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡುವಂತಾಗಿದೆ.
The bypolls to Sindgi (Vijayapura) and Hangal (Haveri) assembly segments will be held on October 30, the Election Commission announced on Tuesday. The results will be declared on November 2. Veerashaiva lingayat asks for tickets by holding press meet.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm