ಬ್ರೇಕಿಂಗ್ ನ್ಯೂಸ್
05-10-21 04:11 pm Mangaluru Correspondent ಕರ್ನಾಟಕ
ಹಾವೇರಿ, ಅ.5: ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರು ರಹಸ್ಯ ಸಭೆ ನಡೆಸಿದ್ದು ತಮ್ಮ ಸಮುದಾಯದ ಅಭ್ಯರ್ಥಿಗಳಿಗೇ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಒತ್ತಡ ಹೇರಿದ್ದಾರೆ. ಟಿಕೆಟ್ ಕೊಡದೇ ಇದ್ದರೆ, ಪಕ್ಷೇತರ ಅಭ್ಯರ್ಥಿ ನಿಲ್ಲಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಭೆಯಲ್ಲಿ ಸಮಾಜದ ರಾಜಾದ್ಯಕ್ಷರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಸಭೆ ಬಳಿಕ ಮಾತನಾಡಿದ ಪಂಚಮಸಾಲಿ ಸಮಾಜದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಈ ಸಾರಿ ನಮ್ಮ ಪಂಚಮಸಾಲಿ ಸಮಾಜಕ್ಕೆ ಟಿಕೆಟ್ ಕೊಡಲೇ ಬೇಕು. ಇಲ್ಲವಾದರೆ ಸಮುದಾಯದಿಂದ ಪಕ್ಷೇತರ ಅಭ್ಯರ್ಥಿ ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಈ ಬಗ್ಗೆ ಮಾತುಕತೆ ನಡೆಸಿದ್ದೇವೆ. ಹಾನಗಲ್ ತಾಲೂಕಿನಲ್ಲಿ 62 ಸಾವಿರ ಮತಗಳು ನಮ್ಮ ವೀರಶೈವ ಲಿಂಗಾಯತ ಸಮಾಜದ್ದು ಇದೆ. ನಿಷ್ಠಾವಂತ ಪಂಚಮಸಾಲಿ ಸಮಾಜದ ಅಭ್ಯರ್ಥಿಗೆ ಮನ್ನಣೆ ನೀಡಬೇಕು. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸಮಾಜದಿಂದ ಅಭ್ಯರ್ಥಿಯನ್ನು ನಿಲ್ಲಿಸಬೇಕು. ನಮ್ಮನ್ನು ಕಡೆಗಣಿಸಬೇಡಿ ಎಂದು ಮನವಿ ಮಾಡುತ್ತೇವೆ. ಹೀಗಾಗಿ ನಾಳೆ ಒಂದು ದಿನ ಕಾದು ನೋಡುತ್ತೇವೆ. ಪಂಚಮಸಾಲಿ ಅಭ್ಯರ್ಥಿಗೆ ಟಿಕೆಟ್ ಕೊಡದೇ ಇದ್ದರೆ, ವೀರಶೈವ ಸಮಾಜದ ವತಿಯಿಂದ ಪಕ್ಷೇತರ ಅಭ್ಯರ್ಥಿಯನ್ನು ನಿಲ್ಲಿಸೋದು ಖಚಿತ ಎಂದು ಬಸವರಾಜ್ ದಿಂಡೂರು ಎಚ್ಚರಿಕೆ ರವಾನಿಸಿದ್ದಾರೆ.
ಪಂಚಮಸಾಲಿ ಸಮಾಜದ ಮುಖಂಡರು ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬಂದಿದ್ದು ಬಿಜೆಪಿ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ಈಗಾಗಲೇ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ರವಾನಿಸಿದೆ. ಮಾಜಿ ಶಾಸಕ ಸಿಎಂ ಉದಾಸಿ ಪತ್ನಿ ರೇವತಿ ಉದಾಸಿ ಸೇರಿದಂತೆ ಇತರ ಇಬ್ಬರ ಹೆಸರನ್ನೂ ಕೊಡಲಾಗಿದೆ. ಇದೇ ವೇಳೆ, ಉದಾಸಿ ಕುಟುಂಬಸ್ಥರಿಗೆ ಮತ್ತೆ ಟಿಕೆಟ್ ಕೊಡುವುದಕ್ಕೆ ಬಿಜೆಪಿಯಲ್ಲೇ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ವೀರಶೈವ ನಾಯಕರು ಈ ರೀತಿಯ ಬೇಡಿಕೆ ಮುಂದಿಟ್ಟಿದ್ದು ಉದಾಸಿ ಕುಟುಂಬಸ್ಥರಿಗಲ್ಲದೆ ಇತರ ಪಕ್ಷದಲ್ಲಿ ಕೆಲಸ ಮಾಡಿ ಬಂದವರಿಗೇ ಮಣೆ ಸಿಗುತ್ತದೆಯೇ ಎನ್ನುವ ಕುತೂಹಲ ಮೂಡುವಂತಾಗಿದೆ.
The bypolls to Sindgi (Vijayapura) and Hangal (Haveri) assembly segments will be held on October 30, the Election Commission announced on Tuesday. The results will be declared on November 2. Veerashaiva lingayat asks for tickets by holding press meet.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm