ಬ್ರೇಕಿಂಗ್ ನ್ಯೂಸ್
07-10-21 08:54 pm Headline Karnataka News Network ಕರ್ನಾಟಕ
ನವದೆಹಲಿ, ಅ.7: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ನಡೆದ ರೈತರ ಮೇಲೆ ಜೀಪು ಹರಿಸಿದ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದ ಬಿಜೆಪಿ ಸಂಸದ ವರುಣ್ ಗಾಂಧಿಯನ್ನು 80 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯತ್ವದಿಂದ ತೆಗೆದು ಹಾಕಲಾಗಿದೆ. ರೈತರ ಮೇಲಿನ ದಾಳಿಯನ್ನು ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವರುಣ್ ಗಾಂಧಿ ಆಗ್ರಹಿಸಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಅದರಿಂದ ಸಂಸದೆ ಮನೇಕಾ ಗಾಂಧಿ ಮತ್ತು ವರುಣ್ ಗಾಂಧಿಯ ಹೆಸರನ್ನು ಕೈಬಿಡಲಾಗಿದೆ. ವರುಣ್ ಗಾಂಧಿ ಉತ್ತರ ಪ್ರದೇಶದ ಫಿಲಿಭಿತ್ ಕ್ಷೇತ್ರದಲ್ಲಿ ಸಂಸದನಾಗಿದ್ದರೆ, ಮನೇಕಾ ಗಾಂಧಿ ಸುಲ್ತಾನ್ ಪುರ್ ಕ್ಷೇತ್ರದಲ್ಲಿ ಸಂಸದರಾಗಿದ್ದಾರೆ.
ಲಖೀಮ್ ಪುರ್ ಹಿಂಸಾಚಾರ ಘಟನೆಯ ಬಳಿಕ ಕೇಂದ್ರ ಸರಕಾರ ಕೃಷಿ ಕಾಯ್ದೆ ಬಗ್ಗೆ ವರುಣ್ ಗಾಂಧಿ ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು. ಅಲ್ಲದೆ, ರೈತರ ಮೇಲೆ ಜೀಪು ಹರಿಸಿದ ಘಟನೆಯ ಎರಡು ವಿಡಿಯೋವನ್ನು ವರುಣ್ ಗಾಂಧಿ ತನ್ನ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ, ಕೃತ್ಯ ಎಸಗಿದ ಆರೋಪಿಗಳು, ಜೀಪು ಮಾಲಕ ಮತ್ತು ಅದರಲ್ಲಿದ್ದ ಎಲ್ಲರನ್ನೂ ಬಂಧಿಸುವಂತೆ ಆಗ್ರಹಿಸಿದ್ದರು. ಈ ವಿಡಿಯೋ ತುಂಬ ಸ್ಪಷ್ಟವಾಗಿದೆ. ಪ್ರತಿಭಟನಾಕಾರರು ಸುಮ್ಮನೆ ಹಿಂಸಾಚಾರ ಎಬ್ಬಿಸಿದ್ದಲ್ಲ. ಅಮಾಯಕ ರೈತರು ಬಲಿಯಾಗಿದ್ದಾರೆ. ಈ ರೀತಿಯ ಕ್ರೂರ ನಡೆಯ ಕುರಿತ ಸಂದೇಶ ಎಲ್ಲ ರೈತರ ತಲೆಗೆ ಹೊಕ್ಕುವ ಮೊದಲು ಆರೋಪಿಗಳನ್ನು ಶಿಕ್ಷಿಸುವ ಮೂಲಕ ನ್ಯಾಯ ದೊರಕಿಸಬೇಕಾಗಿದೆ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದರು.
ಉತ್ತರ ಪ್ರದೇಶ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ನ್ಯಾಯದ ವಿಚಾರದಲ್ಲಿ ದಿಟ್ಟವಾಗಿ ಪ್ರಶ್ನೆಗಳನ್ನು ತೂರಿದ್ದ ವರುಣ್ ಗಾಂಧಿ ಬಿಜೆಪಿ ವರಿಷ್ಠರಿಗೇ ಇರಿಸು ಮುರಿಸು ಮಾಡಿದ್ದರು. ಇದಕ್ಕಾಗಿ ತಾಯಿ, ಮಗನನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದಲೇ ತೆಗೆದು ಹಾಕಿ ಶಿಕ್ಷೆ ವಿಧಿಸಲಾಗಿದೆ ಎನ್ನುವ ಮಾತು ಕೇಳಿಬಂದಿದೆ. ಈ ರೀತಿ ಟ್ವೀಟ್ ಮಾಡಿದ ಎರಡೇ ದಿನದಲ್ಲಿ ಬಿಜೆಪಿ ವರಿಷ್ಠರು ಚಾಟಿ ಬೀಸಿದ್ದಾರೆ.
Bharatiya Janata Party (BJP) leader Varun Gandhi has been dropped from the 80-member National Executive along with his mother Maneka Gandhi. Party chief JP Nadda released the list on Thursday.While Varun Gandhi represents Pilibhit in the Lower House, Maneka is a Lok Sabha MP from Sultanpur.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am