ಬ್ರೇಕಿಂಗ್ ನ್ಯೂಸ್
08-10-21 04:55 pm Headline Karnataka News Network ಕರ್ನಾಟಕ
ಬೆಂಗಳೂರು, ಅ.8 : ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ಜೀಪು ಹರಿಸಿದ ಘಟನೆಯನ್ನು ಅಣಕಿಸಿ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರನ್ನು ಕೆಣಕುವ ರೀತಿ ಹೇಳಿಕೆ ನೀಡಿದ್ದಾರೆ.
ದೇಶದ ಜನರಲ್ಲಿ ಒಂದು ಮನವಿ, ಬಿಜೆಪಿ ನಾಯಕರು ಯಾವುದೇ ಕಡೆ ರಸ್ತೆಯಲ್ಲಿ ವಾಹನಗಳಲ್ಲಿ ತೆರಳುತ್ತಿದ್ದರೆ, ಕೂಡಲೇ ಮೊಬೈಲ್ ನಲ್ಲಿ ಕ್ಯಾಮರಾ ತೆರೆದು ರೆಕಾರ್ಡ್ ಮಾಡಿ. ಬಿಜೆಪಿ ನಾಯಕರು ಎಲ್ಲಿ ಏನು ಮಾಡುತ್ತಾರೆಂದು ಹೇಳಕ್ಕೆ ಆಗುವುದಿಲ್ಲ. ಎಲ್ಲಿಯಾದ್ರೂ ಜನರ ಮೇಲೆ ಕಾರು ಹರಿಸಿ, ಸಾಯಿಸಿದರೆ ಆಗ ನಿಮ್ಮ ಕ್ಯಾಮರಾ ರೆಕಾರ್ಡ್ ದೊಡ್ಡ ಸಾಕ್ಷ್ಯವಾಗುತ್ತದೆ. ದೇಶಕ್ಕೆ ನಿಮ್ಮ ದೊಡ್ಡ ಕೊಡುಗೆಯಾಗುತ್ತದೆ ಎಂದು ಡಿಕೆ ಶಿವಕುಮಾರ್ ವಿಡಿಯೋ ಹೇಳಿಕೆಯನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಖೀಮ್ ಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗನ ಜೀಪು ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಅವರ ಮೇಲಿಂದ ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವಾಗಲೇ ಅದನ್ನು ಅಣಕಿಸಿ, ಡಿಕೆಶಿ ಹೇಳಿಕೆ ನೀಡಿದ್ದಾರೆ.
ಇದಲ್ಲದೆ, ಬಿಜೆಪಿ ನಾಯಕರು ಕಾರಿನಲ್ಲಿ ನಿಮ್ಮ ಹತ್ತಿರದಿಂದ ಬರುತ್ತಾರಂದರೆ, ದಯವಿಟ್ಟು ದೂರವೇ ನಿಂತುಬಿಡಿ. ಈಗಿನ ದಿನಗಳಲ್ಲಿ ಬಿಜೆಪಿ ನಾಯಕರು ಜನರ ಮೇಲೆ ವಾಹನಗಳನ್ನು ಹರಿಸಿ ಕೊಲ್ಲುತ್ತಿದ್ದಾರೆ. ಹಾಗಾಗಿ, ಜನರು ಜಾಗ್ರತೆ ಇರುವಂತೆ ಕೇಳಿಕೊಳ್ಳುತ್ತೇನೆ. ಅಲ್ಲದೆ, ಯಾವಾಗಲೂ ಮೊಬೈಲ್ ಕ್ಯಾಮರಾ ಆನ್ ಮಾಡಿ, ಏನೇ ಆ ರೀತಿಯ ಘಟನೆಗಳಾದಲ್ಲಿ ಅದನ್ನು ರೆಕಾರ್ಡ್ ಮಾಡಿ ಎಂದು ಡಿಕೆಶಿ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.
Taking a swipe at the BJP, Karnataka Congress chief DK Shivakumar on Thursday, urged people to record videos whenever BJP leaders' cars passed them. Claiming that BJP leaders may 'decide to run over people' whenever they want, Shivakumar said that such videos will be a great service to the nation. His snide comments after BJP leader Ashish Mishra allegedly mowed down 4 farmers with his car in UP's Lakhimpur Kheri.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm