ಬ್ರೇಕಿಂಗ್ ನ್ಯೂಸ್
09-10-21 08:57 pm Headline Karnataka News Network ಕರ್ನಾಟಕ
ಬೆಂಗಳೂರು, ಅ.9: ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಯಲಿದೆ. ರಾಜಕಾರಣಿಗಳ ಹೆಸರಿನಲ್ಲಿ ಡೀಲ್ ಮಾಡುವರ ಅಮಿಷಗಳಿಗೆ ಯಾರು ಕೂಡ ಬಲಿಯಾಗಿ ಹಣ ಕಳೆದುಕೊಳ್ಳಬೇಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಲಹೆ ಮಾಡಿದ್ದಾರೆ.
ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿದ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಗೃಹ ಸಚಿವರು ಪೊಲೀಸ್ ಹುದ್ದೆ ಕೊಡಿಸುವ ಹೆಸರಿನಲ್ಲಿ ವಂಚನೆ ಮಾಡುವರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಲಹೆ ಮಾಡಿದ್ದಾರೆ.
ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ ಹಾಗೂ ನಿಯಮಾನುಸಾರ ನಡೆಯುತ್ತಿದ್ದು, ಅಭ್ಯರ್ಥಿಗಳಾಗಲೀ ಅಥವಾ ಪೋಷಕರಾಗಲೀ ಯಾವುದೇ ರೀತಿಯ ವದಂತಿಗೆ ಕಿವಿಗೊಡಬೇಡಿ. ನೇಮಕಾತಿಯಲ್ಲಿ ಕೆಲಸ ಕೊಡಿಸುತ್ತೇನೆ ಎಂದು ಕೆಲವರು ನಂಬಿಕೆ ಹುಟ್ಟಿಸಿ ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಘಟನೆಗಳು ವರದಿಯಾಗಿವೆ. ಅಭ್ಯರ್ಥಿಗಳಾಗಲೀ, ಪೋಷಕರಾಗಲೀ ಯಾರೂ ಅಮಿಷಗಳಿಗೆ ಬಲಿಯಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್ಸ್ ಪೆಕ್ಟರ್ ಹಾಗೂ 4000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ದೈಹಿಕ ಸಾಮರ್ಥ್ಯ ಹಾಗೂ ಲಿಖಿತ ಪರೀಕ್ಷೆ ಅತ್ಯಂತ ಪಾರದರ್ಶಕತೆಯಿಂದ ನಡೆಯುತ್ತಿದ್ದು ಅದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿ ಆಯ್ಕೆ ಮಾನದಂಡ ಆಗಿರುತ್ತದೆ. ಹುದ್ದೆ ಕೊಡಿಸುವುದಾಗಿ ಯಾರಾದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಪೋಷಕರು ವಿಷಯವನ್ನು ಪೊಲೀಸರಿಗೆ ತಿಳಿಸಬೇಕು. ಈ ಮೂಲಕ ವಂಚನೆಯಿಂದ ತಪ್ಪಿಸಿಕೊಳ್ಳಬೇಕು ಎಂದು ಆರಗ ಜ್ಞಾನೇಂದ್ರ ಸಲಹೆ ಮಾಡಿದ್ದಾರೆ.
ಪಿಎಸ್ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ವಂಚನೆ
ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆ ಕೊಡಿಸುವುದಾಗಿ ನಂಬಿಸಿ 18 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪುಟ್ಟರಾಜು ವಂಚನೆಗೆ ಒಳಗಾದ ವ್ಯಕ್ತಿ. ಪುಟ್ಟರಾಜು ಅವರ ಪುತ್ರಿ ಪಿಎಸ್ಐ ದೈಹಿಕ ಪರೀಕ್ಷೆಯಲ್ಲಿ ಪಾಸಾಗಿದ್ದರು. ಲಿಖಿತ ಪರೀಕ್ಷೆ ಬರೆಯಬೇಕಿತ್ತು. ದೇವನಹಳ್ಳಿ ಮೂಲದ ಶ್ರೀನಿವಾಸ್ ರಿಯಲ್ ಎಸ್ಟೇಟ್ ವಹಿವಾಟಿನಲ್ಲಿ ಗುರುತಿಸಿಕೊಂಡಿದ್ದು, ತನಗೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ಪರಿಚಯವಿದ್ದಾರೆ. ನಿಮ್ಮ ಮಗಳಿಗೆ ಪಿಎಸ್ಐ ಹುದ್ದೆ ಕೊಡಿಸುತ್ತೇನೆ ಎಂದು ನಂಬಿಸಿ 70 ಲಕ್ಷ ರೂ. ಡೀಲ್ ಕುದುರಿಸಿದ್ದ. ಅದರಲ್ಲಿ ಅಂತಿಮವಾಗಿ 55 ಲಕ್ಷ ರೂ.ಗೆ ಡೀಲ್ ಕುದುರಿಸಿ ಮುಂಗಡವಾಗಿ 18 ಲಕ್ಷ ರೂ. ಪಡೆದುಕೊಂಡಿದ್ದಾನೆ.
ಈ ಮಧ್ಯೆ ಪಿಎಸ್ಐ ಹುದ್ದೆಗಳ ನೇಮಕಾತಿಗೆ ಯಾರದೇ ಮಧ್ಯ ಪ್ರವೇಶದಿಂದ ಹುದ್ದೆ ದೊರೆಯುವುದಿಲ್ಲ ಎಂಬುದನ್ನು ಆಪ್ತರೊಬ್ಬರು ಪುಟ್ಟರಾಜುಗೆ ಹೇಳಿದ್ದರು. ಕೂಡಲೇ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಹಣ ವಾಪಸು ನೀಡುವಂತೆ ಕೇಳಿದ್ದಾರೆ. ಹಣ ನಾನು ಕೊಟ್ಟು ಬಿಟ್ಟಿದ್ದೇನೆ ಎಂದು ಹೇಳಿ ಹಣ ವಾಪಸು ನೀಡಲು ನಿರಾಕರಿಸಿದ್ದಾರೆ. ಪುಟ್ಟರಾಜು ಸದಾಶಿವನಗರ ಪೊಲೀಸರಿಗೆ ದೂರು ನೀಡಿದ್ದು ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಲಾಗಿದೆ.
The recruitment process of the Police Sub Inspector and Police Constable posts in the Police Department will be very transparent. Home Minister Aaruga Jnanendra advises not to lose money who deals with politicians name
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm