ಬ್ರೇಕಿಂಗ್ ನ್ಯೂಸ್
14-10-21 05:05 pm Headline Karnataka News Network ಕರ್ನಾಟಕ
ಬೆಂಗಳೂರು, ಅ.14: ಮತಾಂತರ ಚಟುವಟಿಕೆ ಹೆಚ್ಚುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ರಾಜ್ಯದಲ್ಲಿ ಕ್ರಿಸ್ತಿಯನ್ ಮಿಶನರಿಗಳ ಬಗ್ಗೆ ಸರ್ವೇ ನಡೆಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಅಧಿಕೃತ ಮತ್ತು ಅನಧಿಕೃತ ಮಿಶನರಿಗಳು ರಾಜ್ಯದಲ್ಲಿ ಎಷ್ಟಿವೆ, ಯಾವ ರೀತಿ ಕಾರ್ಯ ಎಸಗುತ್ತಿವೆ ಎನ್ನುವುದರ ಬಗ್ಗೆ ಸರ್ವೇ ಮಾಡಲು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೂಲಕ ಆದೇಶ ಮಾಡಲಾಗಿದೆ.
ರಾಜ್ಯದಲ್ಲಿ ಮತಾಂತರ ಚಟುವಟಿಕೆ ಹೆಚ್ಚುತ್ತಿರುವ ಆರೋಪದ ಬಗ್ಗೆ ವಿಕಾಸಸೌಧದಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಶಾಸಕರಾದ ಗೂಳಿಹಟ್ಟಿ ಶೇಖರ್, ಪುಟ್ಟರಂಗ ಶೆಟ್ಟಿ, ಬಿ.ಎಂ. ಫಾರೂಕ್, ವಿರೂಪಾಕ್ಷಪ್ಪ ಬಳ್ಳಾರಿ, ಅಶೋಕ್ ನಾಯ್ಕ್ ಸೇರಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಪಾಲ್ಗೊಂಡಿದ್ದರು.
ಕ್ರಿಸ್ತಿಯನ್ ಮಿಶನರಿಗಳಿಗೆ ರಾಜ್ಯ ಸರಕಾರದಿಂದ ಸಿಗುತ್ತಿರುವ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಅಲ್ಲದೆ, ಮಿಶನರಿಗಳ ಸಂಘಟನೆಗಳು ಸರಕಾರದಡಿ ರಿಜಿಸ್ಟರ್ ಆಗಿವೆಯಾ ಎನ್ನುವ ಬಗ್ಗೆಯೂ ಚರ್ಚೆ ನಡೆಯಿತು. ಮತಾಂತರ ಆಗಿರುವ ಜನರಿಗೆ ಸರಕಾರಿ ಸೌಲಭ್ಯ ಸಿಗದಂತೆ ಮಾಡಬೇಕು ಎಂದು ಅಲ್ಪಸಂಖ್ಯಾತ ಕಲ್ಯಾಣ ನಿಗಮದ ಸದಸ್ಯರು ಸಲಹೆ ಮಾಡಿದ್ದಾರೆ.
ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಮಾತನಾಡಿ, ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ 40 ಶೇಕಡಾ ಚರ್ಚ್ ಗಳು ಅನಧಿಕೃತವಾಗಿ ಕಾರ್ಯಾಚರಿಸುತ್ತಿವೆ. ಈ ಬಗ್ಗೆ ಸರಿಯಾದ ವಿವರಗಳನ್ನು ಕಲೆ ಹಾಕಬೇಕು. ಅಲ್ಲದೆ, ಅನಧಿಕೃತ ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಪಡೆದು ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ. ಈಗಾಗ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಹೇಳಿದ್ದಾರೆ. ಇತರ ರಾಜ್ಯಗಳಲ್ಲಿ ಈ ಬಗ್ಗೆ ಯಾವ ರೀತಿಯ ಕಾಯ್ದೆಗಳಿವೆ ಎಂಬ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಕಾನೂನು ಜಾರಿಗೆ ತರುವುದಾಗಿ ಹೇಳಿದ್ದಾರೆಂದು ಶಾಸಕ ಗೂಳಿಹಟ್ಟಿ ತಿಳಿಸಿದ್ದಾರೆ.
ಶಾಸಕ ಗೂಳಿಹಟ್ಟಿ ಶೇಖರ್ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲಿಯೂ ಮತಾಂತರ ಚಟುವಟಿಕೆ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, ತನ್ನ ತಾಯಿ ಕೂಡ ಮಿಶನರಿಗಳ ಆಮಿಷಕ್ಕೆ ಬಲಿಯಾಗಿ ಮತಾಂತರ ಆಗಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದವರ ವಿರುದ್ಧ ಮಿಶನರಿಗಳು ಸುಳ್ಳು ಕೇಸು ಹಾಕಿಸುತ್ತಿದ್ದಾರೆ ಎಂದು ಅಧಿವೇಶನದಲ್ಲಿ ಹೇಳಿದ್ದರು.
The Backward Classes and Minorities Welfare Department in Karnataka has ordered the officers to conduct a survey of both official and non-official Christian missionaries functioning in the state, according to sources. The order is being issued in the backdrop of discussion of rampant religious conversions in the state. The decision was taken in the meeting held at Vikasa Soudha on Wednesday by the Backward Classes and Minorities Welfare Committee.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm