ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm