ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm