ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm