ಬ್ರೇಕಿಂಗ್ ನ್ಯೂಸ್
19-10-21 04:53 pm Headline Karnataka News Network ಕರ್ನಾಟಕ
ಢಾಕಾ, ಅ.19: ಬಾಂಗ್ಲಾದೇಶದಲ್ಲಿ ಹಿಂದುಗಳ ಮನೆ, ದೇವಸ್ಥಾನಗಳ ಮೇಲೆ ದಾಳಿ ಮುಂದುವರಿದಿದ್ದು, ಪ್ರವಾದಿ ನಿಂದನೆ ನೆಪ ಇಟ್ಟುಕೊಂಡು ಜನಾಂಗೀಯ ಹಿಂಸೆ ನಡೆದಿದೆ. ಹಿಂದುಗಳನ್ನು ಗುರಿಯಾಗಿಸಿ ಉದ್ರಿಕ್ತರ ಗುಂಪು ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.
ಬಾಂಗ್ಲಾ ರಾಜಧಾನಿ ಢಾಕಾದಿಂದ 255 ಕಿಮೀ ದೂರದ ರಂಗ್ ಪುರ್ ಜಿಲ್ಲೆಯಲ್ಲಿ ಕನಿಷ್ಠ 66 ಹಿಂದುಗಳ ಮನೆಗಳ ಮೇಲೆ ದಾಳಿ ನಡೆಸಿ, ಹಾನಿ ಮಾಡಿದ್ದಾರೆ. ಹಿಂದು ಮೀನುಗಾರನೊಬ್ಬ ಫೇಸ್ಬುಕ್ ನಲ್ಲಿ ಪ್ರವಾದಿಗೆ ಅಗೌರವದಿಂದ ಪೋಸ್ಟ್ ಮಾಡಿದ್ದಾನೆಂಬ ವಿಚಾರದಲ್ಲಿ ಕಿಡಿಗೇಡಿಗಳು ವದಂತಿಗಳನ್ನು ಹರಡಿದ್ದು, ಮುಸ್ಲಿಮ್ ಉದ್ರಿಕ್ತರ ಗುಂಪು ದಾಳಿ ನಡೆಸಿದೆ. ಪೊಲೀಸರು ಜೊತೆಗಿದ್ದರೂ, ಅವರನ್ನು ಲೆಕ್ಕಿಸದೆ ಮನೆಗಳಿಗೆ ಬೆಂಕಿ ಹಚ್ಚುತ್ತಿದ್ದು ಅಲ್ಲಿದ್ದ ನಿವಾಸಿಗಳ ಮೇಲೆ ಪೀಡನೆ ನೀಡುತ್ತಿದ್ದಾರೆ. ರಂಗ್ ಪುರ್ ಜಿಲ್ಲೆಯ ಪಿರ್ಗಾಂಜ್ ಮಜಿಪಾರ ಎಂಬ ಗ್ರಾಮದಲ್ಲಿ 29 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾಗಿ ಇಂಡಿಯಾ ಟುಡೇ ಹೇಳಿದೆ.



ಮೊನ್ನೆ ಭಾನುವಾರ ನಾನೌರ್ ದಿಘಿ ಸರೋವರದ ಬಳಿಯ ಕುಮಿಲಾ ಎಂಬಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದ ಪೆಂಡಾಲ್ ಮೇಲೆ ಗುಂಪು ದಾಳಿ ನಡೆಸಿದ್ದು, ಅಲ್ಲಿ ಮೂರು ಮಂದಿಯನ್ನು ಹತ್ಯೆ ಮಾಡಲಾಗಿತ್ತು. ದುರ್ಗಾ ಪೂಜೆಯ ಪೆಂಡಾಲ್ ನಲ್ಲಿ ಖುರಾನ್ ಪುಸ್ತಕಕ್ಕೆ ಅವಮಾನ ಮಾಡಲಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದರು. ಅದನ್ನು ನಂಬಿದ್ದ ಮತಾಂಧರು ದುರ್ಗಾ ಪೂಜೆ ನಡೆಸುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ್ದರು. ಕುಮಿಲ್ಲಾದ ಹಿಂಸಾಚಾರ ಘಟನೆಯ ಬೆನ್ನಲ್ಲೇ ಚಾಂದ್ ಪುರದ ಹಜೀಗಂಜ್, ಚತ್ತೋಗ್ರಾಮ್ ಜಿಲ್ಲೆಯ ಬನ್ಶಕಾಳಿ, ಕೋಕ್ಸ್ ಬಜಾರಿನ ಪೆಕುವಾ ಎಂಬಲ್ಲಿನ ದೇವಸ್ಥಾನಗಳಿಗೂ ದಾಳಿ ನಡೆಸಲಾಗಿದ್ದು ಜಖಂ ಮಾಡಲಾಗಿದೆ.
ಕಳೆದ ಶುಕ್ರವಾರ ಚಿತ್ತಗಾಂಗ್ ಜಿಲ್ಲೆಯ ನೋಕಾಲಿ ಎಂಬಲ್ಲಿ ಇಸ್ಕಾನ್ ದೇವಸ್ಥಾನದ ಮೇಲೆ ಬೆಂಕಿ ಹಚ್ಚಲಾಗಿತ್ತು. ಇಸ್ಕಾನ್ ಮಂದಿರದಲ್ಲಿ ದುರ್ಗಾ ಪೂಜೆ ನಡೆಸುತ್ತಿದ್ದಾಗ 500 ಮಂದಿಯಷ್ಟಿದ್ದ ಉದ್ರಿಕ್ತರ ಗುಂಪು ದಾಳಿ ನಡೆಸಿದ್ದು, ಬೆಂಕಿ ಹಚ್ಚಿದ್ದಲ್ಲದೆ, ಅಲ್ಲಿದ್ದ ಇಸ್ಕಾನ್ ಅರ್ಚಕರ ಮೇಲೆ ಚೂರಿಯಿಂದ ಇರಿದು ಕೊಲ್ಲಲಾಗಿತ್ತು.
Amid outrage over the incidents of temple vandalism in Bangladesh, a group of assailants vandalised at least 66 homes and torched 20 homes of Hindus in the country on Sunday over an alleged blasphemous social media post.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm