ಬ್ರೇಕಿಂಗ್ ನ್ಯೂಸ್
19-10-21 10:03 pm Mangaluru Correspondent ಕರ್ನಾಟಕ
ವಿಜಯಪುರ, ಅ.19: ರಾಹುಲ್ ಗಾಂಧಿ ಬಗ್ಗೆ ಡ್ರಗ್ ಅಡಿಕ್ಟ್ , ಡ್ರಗ್ ಪೆಡ್ಲರ್ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ವಾಗ್ದಾಳಿ ನಡೆಸಿದ್ದಾರೆ.
ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ಹುಚ್ಚನಂತೆ ವರ್ತಿಸ್ತಾರೆ. ನಳಿನ್ ಕಟೀಲ್ ಒಬ್ಬ ಮೆಚ್ಯೂರಿಟಿ ಇಲ್ಲದ ರಾಜಕಾರಣಿ. ಬೇಜವಾಬ್ದಾರಿ ರಾಜಕಾರಣಿ, ಆತನಿಗೆ ಮೆಂಟಲ್ ಬ್ಯಾಲೇನ್ಸ್ ತಪ್ಪಿ ಹೋಗಿದೆ. ನಿಮಾನ್ಸ್ ನಲ್ಲಿ ತೋರಿಕೊಳ್ಳೋದು ಒಳ್ಳೆಯದು ಎಂದು ಸಲಹೆ ಮಾಡಿದ್ದಾರೆ.
ನಮ್ಮ ನಾಯಕ @RahulGandhi ಅವರ ಬಗ್ಗೆ @nalinkateel ಆಡಿದ ಮಾತುಗಳು ಅವರ ಅಸ್ವಸ್ಥ ಮನಸ್ಸಿನ ಪ್ರತೀಕ.
— Siddaramaiah (@siddaramaiah) October 19, 2021
ಈ ಹುಚ್ಚು ಸಾಂಕ್ರಾಮಿಕವಾಗುವ ಮೊದಲು ಅವರನ್ನು ಶೀಘ್ರ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಬೇಕೆಂದು @BJP4India ರಾಷ್ಟ್ರೀಯ ಅಧ್ಯಕ್ಷ @JPNadda ಅವರಲ್ಲಿ ಕೇಳಿಕೊಳ್ಳುತ್ತೇನೆ.
ಬೇಜವಾಬ್ದಾರಿಯಿಂದ ರಾಹುಲ್ ಗಾಂಧಿ ವಿರುದ್ದ ಮಾತನಾಡಿರೋದನ್ನ ಖಂಡಿಸ್ತೀನಿ. ರಾಹುಲ್ ಬಗ್ಗೆ ಸಲ್ಲದ ಮಾತನ್ನು ಆಡಿರುವ ನಳಿನ್ ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಯಾವ್ದಾದ್ರೂ ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಇದು ಬಿಜೆಪಿಯವರ ಸಂಸ್ಕೃತಿಯನ್ನು ತೋರಿಸುತ್ತದೆ. ಇಂಥ ಅಪ್ರಬುದ್ಧ ವ್ಯಕ್ತಿಯನ್ನು ಬಿಜೆಪಿ ಅಧ್ಯಕ್ಷನಾಗಿ ಮಾಡಿದ್ದಾರಲ್ಲಾ.. ಈ ಬಗ್ಗೆ ನಳಿನ್ ಕುಮಾರ್ ಬಹಿರಂಗ ಕ್ಷಮೆ ಯಾಚಿಸದೇ ಇದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ.
‘@nalinkateel has made despicable statements against Sri @RahulGandhi.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 19, 2021
How can such an uncultured and senseless man be the @BJP4Karnataka President.
He has shown how polluted his mind his and how the BJP is a party filled with crass and lumpen elements. pic.twitter.com/4QXzvTWsWS
ದಿನೇಶ್ ಗುಂಡೂರಾವ್ ಮಾತನಾಡಿ, ಆ ವ್ಯಕ್ತಿ ಸಂಸದನಾಗಿ ಈ ರೀತಿ ಮಾತನಾಡುತ್ತಾರೆ ಅಂದರೆ ಬೌದ್ಧಿಕ ಮಟ್ಟವನ್ನು ತೋರಿಸುತ್ತದೆ. ಇಂಥವರು ಬಿಜೆಪಿ ರಾಜ್ಯಾಧ್ಯಕ್ಷ ಎಂದು ವ್ಯಂಗ್ಯವಾಡಿದ್ದಾರೆ.
ಮೋದಿ ಬಗ್ಗೆ ಹೆಬ್ಬೆಟ್ಟು ಗಿರಾಕಿ ಎಂದಿದ್ದ ಕಾಂಗ್ರೆಸ್ ಟ್ವೀಟ್ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ನಳಿನ್ ಕುಮಾರ್ ಹುಬ್ಬಳ್ಳಿಯಲ್ಲಿ ಭಾಷಣ ಮಾಡುತ್ತಾ ರಾಹುಲ್ ಗಾಂಧಿ ಬಗ್ಗೆ ಟೀಕಿಸಿದ್ದರು. ರಾಹುಲ್ ಹಿಂದೆ ಡ್ರಗ್ ಅಡಿಕ್ಟ್ ಆಗಿದ್ದರು. ಡ್ರಗ್ ಪೆಡ್ಲರ್ ಕೂಡ ಆಗಿದ್ದರೆಂಬ ವರದಿಗಳಿದ್ದವು ಎಂದು ಟೀಕಿಸಿದ್ದು ಕಾಂಗ್ರೆಸ್ ನಾಯಕರಲ್ಲಿ ಆಕ್ರೋಶ ಮೂಡಿಸಿದೆ.
ರಾಹುಲ್ ಗಾಂಧಿ ಒಬ್ಬ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್ ; ನಳಿನ್ ಕುಮಾರ್ ವಿವಾದಾತ್ಮಕ ಹೇಳಿಕೆ
How can Naleen Kumar Kateel be such an uncultured and senseless man be the BJP President slams Dinesh Gundu Rao. He has shown how polluted his mind his and how the BJP is a party filled with crass and lumpen elements.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am