ಬ್ರೇಕಿಂಗ್ ನ್ಯೂಸ್
20-10-21 10:42 pm Headline Karnataka News Desk ಕರ್ನಾಟಕ
ಮೈಸೂರು, ಅ.20: ನಳಿನ್ ಕುಮಾರ್ ಕಟೀಲು ಒಬ್ಬ ಅಯೋಗ್ಯ, ಲಂಪಟ. ಅವಿವೇಕಿ, ಮತಿಹೀನ ವ್ಯಕ್ತಿ. ವಿವಾಹಿತ ಮಹಿಳೆಯನ್ನು ನಂಬಿಸಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಬಗ್ಗೆ ಡ್ರಗ್ ಪೆಡ್ಲರ್ ಎಂದು ಕರೆದಿದ್ದ ನಳಿನ್ ಕುಮಾರ್ ಬಗ್ಗೆ ಆಕ್ರೋಶಿತರಾಗಿ ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್, ನಳಿನ್ ಬಗ್ಗೆ ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಹಿಸ್ಟರಿಯನ್ನು ನೋಡಿದರೆ, 2014ರ ಚುನಾವಣೆ ಸಂದರ್ಭದಲ್ಲಿ ವಿವಾಹಿತ ಮಹಿಳೆಯೊಬ್ಬರು ರಾಜ್ಯದ ನಂಬರ್ ವನ್ ಚಾನೆಲ್ ನಲ್ಲಿ ಬಂದು ಹೇಳಿಕೆ ನೀಡಿದ್ದರು. ತನಗೆ ಮದುವೆಯಾಗುತ್ತೇನೆಂದು ಮೋಸ ಮಾಡಿದ್ದಾಗಿ ಹೇಳಿಕೆ ನೀಡಿದ್ದರು. ಆಕೆಯ ಪತಿಗೆ ಬೆದರಿಕೆ ಹಾಕಿದ್ದಾಗಿ ಹೇಳಿದ್ದರು. ಇಂಥ ಚರಿತ್ರಹೀನ ವ್ಯಕ್ತಿ ನಳಿನ್ ಕುಮಾರ್. ಇದೇ ವ್ಯಕ್ತಿ ಮಂಗಳೂರಿನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯ ಖಾಸಾ ದೋಸ್ತ್ ಆಗಿದ್ದಾನೆ. ಇಂತಹ ವ್ಯಕ್ತಿ ಕಾಂಗ್ರೆಸ್ ನಾಯಕರಿಗೆ ಸಭ್ಯತೆಯ ಪಾಠ ಹೇಳುತ್ತಾನೆ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಳಿನ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಹೆಚ್ಚು ಮಾತನಾಡಿದರೆ ನಮಗೂ ಕೆದಕುವುದಕ್ಕೆ ಗೊತ್ತಿದೆ. ಸೋನಿಯಾ ಗಾಂಧಿ, ಡಿಕೆ ಶಿವಕುಮಾರ್ ಜಾಮೀನಿನಲ್ಲಿ ಹೊರಗಿದ್ದಾರೆ ಎಂದು ಹೇಳಿದ್ದೀರಿ. ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜೈಲಿನಲ್ಲಿ ಇರಲಿಲ್ಲವೇ ಎಂದು ಲಕ್ಷ್ಮಣ್ ಪ್ರಶ್ನಿಸಿದ್ದಾರೆ. ನಿಮಗೆ ತಾಕತ್ತಿದ್ದರೆ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಬನ್ನಿ. ಕಾಂಗ್ರೆಸಿನ ವೈಫಲ್ಯವಿದ್ದರೆ ಅದನ್ನು ಟೀಕಿಸಿ. ವೈಯಕ್ತಿಯ ನಿಂದನೆ ಮಾಡಿದರೆ ನಳಿನ್ ಕುಮಾರ್ ಕಟೀಲು ಮತ್ತು ಬಿಜೆಪಿ ಕಚೇರಿಗಳ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಹರಿಹಾಯ್ದಿದ್ದಾರೆ.
ಮಾದಕ ವಸ್ತುಗಳ ಬಗ್ಗೆ ತನಿಖೆ ಮಾಡಿಸಲು ಎನ್ ಸಿಬಿ ಇದೆ. ಕೇಂದ್ರದಲ್ಲಿ ನಿಮ್ಮದೇ ಸರಕಾರವಿದೆ. ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಆಗಿದ್ದರೆ ತನಿಖೆ ಮಾಡಿಸಿ ಎಂದು ಸವಾಲು ಹಾಕಿದರು.
BJP Nalin Kumar Kateel has illicit affairs with woman close friend of Murderer, he's a cheat slams Congress spokesperson M Lakshman
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm