ಬ್ರೇಕಿಂಗ್ ನ್ಯೂಸ್
20-10-21 10:42 pm Headline Karnataka News Desk ಕರ್ನಾಟಕ
ಮೈಸೂರು, ಅ.20: ನಳಿನ್ ಕುಮಾರ್ ಕಟೀಲು ಒಬ್ಬ ಅಯೋಗ್ಯ, ಲಂಪಟ. ಅವಿವೇಕಿ, ಮತಿಹೀನ ವ್ಯಕ್ತಿ. ವಿವಾಹಿತ ಮಹಿಳೆಯನ್ನು ನಂಬಿಸಿ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಬಗ್ಗೆ ಡ್ರಗ್ ಪೆಡ್ಲರ್ ಎಂದು ಕರೆದಿದ್ದ ನಳಿನ್ ಕುಮಾರ್ ಬಗ್ಗೆ ಆಕ್ರೋಶಿತರಾಗಿ ಸುದ್ದಿಗೋಷ್ಠಿ ನಡೆಸಿರುವ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್, ನಳಿನ್ ಬಗ್ಗೆ ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಹಿಸ್ಟರಿಯನ್ನು ನೋಡಿದರೆ, 2014ರ ಚುನಾವಣೆ ಸಂದರ್ಭದಲ್ಲಿ ವಿವಾಹಿತ ಮಹಿಳೆಯೊಬ್ಬರು ರಾಜ್ಯದ ನಂಬರ್ ವನ್ ಚಾನೆಲ್ ನಲ್ಲಿ ಬಂದು ಹೇಳಿಕೆ ನೀಡಿದ್ದರು. ತನಗೆ ಮದುವೆಯಾಗುತ್ತೇನೆಂದು ಮೋಸ ಮಾಡಿದ್ದಾಗಿ ಹೇಳಿಕೆ ನೀಡಿದ್ದರು. ಆಕೆಯ ಪತಿಗೆ ಬೆದರಿಕೆ ಹಾಕಿದ್ದಾಗಿ ಹೇಳಿದ್ದರು. ಇಂಥ ಚರಿತ್ರಹೀನ ವ್ಯಕ್ತಿ ನಳಿನ್ ಕುಮಾರ್. ಇದೇ ವ್ಯಕ್ತಿ ಮಂಗಳೂರಿನಲ್ಲಿ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯ ಖಾಸಾ ದೋಸ್ತ್ ಆಗಿದ್ದಾನೆ. ಇಂತಹ ವ್ಯಕ್ತಿ ಕಾಂಗ್ರೆಸ್ ನಾಯಕರಿಗೆ ಸಭ್ಯತೆಯ ಪಾಠ ಹೇಳುತ್ತಾನೆ ಎಂದು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಳಿನ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಹೆಚ್ಚು ಮಾತನಾಡಿದರೆ ನಮಗೂ ಕೆದಕುವುದಕ್ಕೆ ಗೊತ್ತಿದೆ. ಸೋನಿಯಾ ಗಾಂಧಿ, ಡಿಕೆ ಶಿವಕುಮಾರ್ ಜಾಮೀನಿನಲ್ಲಿ ಹೊರಗಿದ್ದಾರೆ ಎಂದು ಹೇಳಿದ್ದೀರಿ. ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜೈಲಿನಲ್ಲಿ ಇರಲಿಲ್ಲವೇ ಎಂದು ಲಕ್ಷ್ಮಣ್ ಪ್ರಶ್ನಿಸಿದ್ದಾರೆ. ನಿಮಗೆ ತಾಕತ್ತಿದ್ದರೆ ಅಭಿವೃದ್ಧಿ ವಿಚಾರದಲ್ಲಿ ಚರ್ಚೆಗೆ ಬನ್ನಿ. ಕಾಂಗ್ರೆಸಿನ ವೈಫಲ್ಯವಿದ್ದರೆ ಅದನ್ನು ಟೀಕಿಸಿ. ವೈಯಕ್ತಿಯ ನಿಂದನೆ ಮಾಡಿದರೆ ನಳಿನ್ ಕುಮಾರ್ ಕಟೀಲು ಮತ್ತು ಬಿಜೆಪಿ ಕಚೇರಿಗಳ ಮುಂದೆ ಧರಣಿ ನಡೆಸಬೇಕಾಗುತ್ತದೆ ಎಂದು ಹರಿಹಾಯ್ದಿದ್ದಾರೆ.
ಮಾದಕ ವಸ್ತುಗಳ ಬಗ್ಗೆ ತನಿಖೆ ಮಾಡಿಸಲು ಎನ್ ಸಿಬಿ ಇದೆ. ಕೇಂದ್ರದಲ್ಲಿ ನಿಮ್ಮದೇ ಸರಕಾರವಿದೆ. ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಆಗಿದ್ದರೆ ತನಿಖೆ ಮಾಡಿಸಿ ಎಂದು ಸವಾಲು ಹಾಕಿದರು.
BJP Nalin Kumar Kateel has illicit affairs with woman close friend of Murderer, he's a cheat slams Congress spokesperson M Lakshman
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am