ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm