ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm