ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm