ಬ್ರೇಕಿಂಗ್ ನ್ಯೂಸ್
            
                        24-10-21 03:11 pm Headline Karnataka News Network ಕರ್ನಾಟಕ
            ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
            
            
            The chopper of Bhyrathi Suresh that was heading for the Hangal election campaign made its landing in other village due to some technical issues
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm