ಬ್ರೇಕಿಂಗ್ ನ್ಯೂಸ್
24-10-21 04:33 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಅ.24 : ಕೋವಿಡ್ ಬಂದ ಬಳಿಕ ದೇಹದಲ್ಲಿ ಪ್ರತಿರೋಧ ಶಕ್ತಿ ಹೆಚ್ಚಿಸಲೆಂದು ಇಮ್ಯುನಿಟಿ ಬೂಸ್ಟರ್ ಮಾದರಿಯ ಹಲವಾರು ಔಷಧಿಗಳು ಮಾರುಕಟ್ಟೆಗೆ ಬಂದಿದ್ದವು. ಆದರೆ, ಕಾರ್ಮಿಕ ಇಲಾಖೆಯಿಂದ ಕೊಡಲಾಗಿದ್ದ ಇಮ್ಯೂನಿಟಿ ಬೂಸ್ಟರ್ ಕುಡಿದ ಎಂಟು ಜನ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಬೆಳಕಿಗೆ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯ ಸರ್ಕಾರ ಕಾರ್ಮಿಕ ಕಲ್ಯಾಣ ಇಲಾಖೆಯ ಮೂಲಕ ರಾಜ್ಯದಾದ್ಯಂತ ಕಟ್ಟಡ ಹಾಗೂ ಇನ್ನಿತರ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಇರುವ ಕಿಟ್ ಗಳನ್ನು ವಿತರಣೆ ಮಾಡಿತ್ತು. ಅದರಂತೆ ಕೋಟೆನಾಡು ಚಿತ್ರದುರ್ಗದಲ್ಲೂ ಅ.8ರಂದು ಜಿಪಂ ಸಭಾಂಗಣದಲ್ಲಿ ಸುಮಾರು 800 ಜನ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್ ಗಳನ್ನು ವಿತರಿಸಲಾಗಿತ್ತು. ಆದರೆ ಕಾರ್ಮಿಕರು ಹಬ್ಬವಿದ್ದುದರಿಂದ ಅದನ್ನು ತಕ್ಷಣವೇ ಕುಡಿಯದೇ ನಿನ್ನೆ ಕೆಲವು ಕಡೆ ಕಾಯಿಸಿ ಕುಡಿದಿದ್ದಾರೆ. ಕುಡಿದ ಬೆನ್ನಲ್ಲೇ ವಾಂತಿ ಭೇದಿ ಶುರುವಾಗಿದ್ದು, ಎಲ್ಲರೂ ಒಂದೇ ಬಾರಿಗೆ ಬಂದು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಲಾಖೆಯಿಂದ ಕೊಟ್ಟಿರುವ ಡಬ್ಬಗಳ ಪುಡಿಯಲ್ಲಿ ಪ್ಲಾಸ್ಟಿಕ್ ಮಿಶ್ರಣವೂ ಇದೆ. ಕಳಪೆಯಿಂದ ಕೂಡಿರುವ ಮಿಶ್ರಣವನ್ನು ಕೊಟ್ಟಿದ್ದಾರೆ. ಇದನ್ನು ಕುಡಿದ ಮೇಲೆ ನಮಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ಕಟ್ಡಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್ ಆರೋಪಿಸಿದ್ದಾರೆ.

ಎಂಟು ಜನ ಕಾರ್ಮಿಕರು ಇಮ್ಯೂನಿಟಿ ಬೂಸ್ಟರ್ ಕುಡಿದು ಆಸ್ಪತ್ರೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಗುಲ್ಬಾರ್ಗದಿಂದ ಕಾರ್ಮಿಕ ಕಲ್ಯಾಣ ಇಲಾಖೆಯ ಉಪ ಆಯುಕ್ತ ನಾಗೇಶ್ ಆಗಮಿಸಿದ್ದು ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಇಲಾಖೆಯಿಂದ ಕೊಟ್ಟಿರುವ ಇಮ್ಯುನಿಟಿ ಬೂಸ್ಟರ್ ಡಬ್ಬಗಳು ಹಾಗೂ ಅವುಗಳ ಪುಡಿಯನ್ನು ಪರಿಶೀಲಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ, ಸರ್ಕಾರದ ನಿರ್ದೇಶನದಂತೆ ಕಾರ್ಮಿಕರಿಗೆ ಕಿಟ್ ಗಳನ್ನು ನೀಡಲಾಗಿದ್ದು, ರಾಜ್ಯದಲ್ಲಿ ಯಾವುದೇ ದೂರುಗಳು ಬಂದಿಲ್ಲ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಈ ಘಟನೆ ಸಂಭವಿಸಿದೆ. ನಿಖರ ಕಾರಣ ತಿಳಿದು ಬರುವವರೆಗೂ ಉಳಿದ ನಾಲ್ಕೂವರೆ ಸಾವಿರ ಕಿಟ್ ಗಳ ಹಂಚಿಕೆಯನ್ನು ನಿಲ್ಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ನಾಗೇಶ್ ತಿಳಿಸಿದ್ದಾರೆ.
Eight workers who drank an Immunity Booster which is given by labour department have been hospitalized.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm