ಬ್ರೇಕಿಂಗ್ ನ್ಯೂಸ್
24-10-21 04:33 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಅ.24 : ಕೋವಿಡ್ ಬಂದ ಬಳಿಕ ದೇಹದಲ್ಲಿ ಪ್ರತಿರೋಧ ಶಕ್ತಿ ಹೆಚ್ಚಿಸಲೆಂದು ಇಮ್ಯುನಿಟಿ ಬೂಸ್ಟರ್ ಮಾದರಿಯ ಹಲವಾರು ಔಷಧಿಗಳು ಮಾರುಕಟ್ಟೆಗೆ ಬಂದಿದ್ದವು. ಆದರೆ, ಕಾರ್ಮಿಕ ಇಲಾಖೆಯಿಂದ ಕೊಡಲಾಗಿದ್ದ ಇಮ್ಯೂನಿಟಿ ಬೂಸ್ಟರ್ ಕುಡಿದ ಎಂಟು ಜನ ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಬೆಳಕಿಗೆ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಜ್ಯ ಸರ್ಕಾರ ಕಾರ್ಮಿಕ ಕಲ್ಯಾಣ ಇಲಾಖೆಯ ಮೂಲಕ ರಾಜ್ಯದಾದ್ಯಂತ ಕಟ್ಟಡ ಹಾಗೂ ಇನ್ನಿತರ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಇರುವ ಕಿಟ್ ಗಳನ್ನು ವಿತರಣೆ ಮಾಡಿತ್ತು. ಅದರಂತೆ ಕೋಟೆನಾಡು ಚಿತ್ರದುರ್ಗದಲ್ಲೂ ಅ.8ರಂದು ಜಿಪಂ ಸಭಾಂಗಣದಲ್ಲಿ ಸುಮಾರು 800 ಜನ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್ ಗಳನ್ನು ವಿತರಿಸಲಾಗಿತ್ತು. ಆದರೆ ಕಾರ್ಮಿಕರು ಹಬ್ಬವಿದ್ದುದರಿಂದ ಅದನ್ನು ತಕ್ಷಣವೇ ಕುಡಿಯದೇ ನಿನ್ನೆ ಕೆಲವು ಕಡೆ ಕಾಯಿಸಿ ಕುಡಿದಿದ್ದಾರೆ. ಕುಡಿದ ಬೆನ್ನಲ್ಲೇ ವಾಂತಿ ಭೇದಿ ಶುರುವಾಗಿದ್ದು, ಎಲ್ಲರೂ ಒಂದೇ ಬಾರಿಗೆ ಬಂದು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಲಾಖೆಯಿಂದ ಕೊಟ್ಟಿರುವ ಡಬ್ಬಗಳ ಪುಡಿಯಲ್ಲಿ ಪ್ಲಾಸ್ಟಿಕ್ ಮಿಶ್ರಣವೂ ಇದೆ. ಕಳಪೆಯಿಂದ ಕೂಡಿರುವ ಮಿಶ್ರಣವನ್ನು ಕೊಟ್ಟಿದ್ದಾರೆ. ಇದನ್ನು ಕುಡಿದ ಮೇಲೆ ನಮಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ಕಟ್ಡಡ ಕಾರ್ಮಿಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ್ ಆರೋಪಿಸಿದ್ದಾರೆ.

ಎಂಟು ಜನ ಕಾರ್ಮಿಕರು ಇಮ್ಯೂನಿಟಿ ಬೂಸ್ಟರ್ ಕುಡಿದು ಆಸ್ಪತ್ರೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಗುಲ್ಬಾರ್ಗದಿಂದ ಕಾರ್ಮಿಕ ಕಲ್ಯಾಣ ಇಲಾಖೆಯ ಉಪ ಆಯುಕ್ತ ನಾಗೇಶ್ ಆಗಮಿಸಿದ್ದು ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಇಲಾಖೆಯಿಂದ ಕೊಟ್ಟಿರುವ ಇಮ್ಯುನಿಟಿ ಬೂಸ್ಟರ್ ಡಬ್ಬಗಳು ಹಾಗೂ ಅವುಗಳ ಪುಡಿಯನ್ನು ಪರಿಶೀಲಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ, ಸರ್ಕಾರದ ನಿರ್ದೇಶನದಂತೆ ಕಾರ್ಮಿಕರಿಗೆ ಕಿಟ್ ಗಳನ್ನು ನೀಡಲಾಗಿದ್ದು, ರಾಜ್ಯದಲ್ಲಿ ಯಾವುದೇ ದೂರುಗಳು ಬಂದಿಲ್ಲ. ಆದರೆ ಚಿತ್ರದುರ್ಗದಲ್ಲಿ ಮಾತ್ರ ಈ ಘಟನೆ ಸಂಭವಿಸಿದೆ. ನಿಖರ ಕಾರಣ ತಿಳಿದು ಬರುವವರೆಗೂ ಉಳಿದ ನಾಲ್ಕೂವರೆ ಸಾವಿರ ಕಿಟ್ ಗಳ ಹಂಚಿಕೆಯನ್ನು ನಿಲ್ಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ನಾಗೇಶ್ ತಿಳಿಸಿದ್ದಾರೆ.
Eight workers who drank an Immunity Booster which is given by labour department have been hospitalized.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am