ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.
ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.
ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm