ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.
ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.
ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm