ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.

ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.

ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am