ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.

ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.

ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm