ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.

ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.

ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm