ಬ್ರೇಕಿಂಗ್ ನ್ಯೂಸ್
28-10-21 04:14 pm H K News Desk ಕರ್ನಾಟಕ
ಕಾರವಾರ, ಅ.28: ಕುಮಟಾ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಪತ್ತೆಯಾದ ವಸ್ತು ಬಾಂಬ್ ಅಲ್ಲ. ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಎಂದು ಕಾರವಾರ ಎಸ್ಪಿ ಶಿವಪ್ರಕಾಶ್ ದೇವರಾಜು ಸ್ಪಷ್ಟಪಡಿಸಿದ್ದಾರೆ.
ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಬದಿಯ ಗುಡ್ಡದಲ್ಲಿ ಬಾಂಬ್ ರೀತಿಯ ವಸ್ತು ನಿನ್ನೆ ಸಂಜೆ ಪತ್ತೆಯಾಗಿತ್ತು. ವಿದ್ಯುತ್ ವೈರ್ ಗಳನ್ನು ಜೋಡಿಸಿ ಡಿಟೋನೇಟರ್ ರೀತಿಯ ಬಾಂಬ್ ಅಳವಡಿಸಲಾಗಿದೆ ಎಂದು ಸ್ಥಳೀಯರು ಆತಂಕ ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಾರವಾರ ಪೊಲೀಸರು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳವನ್ನು ಕರೆಸಲಾಗಿತ್ತು. ತಜ್ಞರು ಬಂದು ಪರಿಶೀಲಿಸಿದ್ದು ಅದರಲ್ಲಿ ಬಾಂಬ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಐಇಡಿ ಬಾಂಬ್ ಮಾದರಿಯಲ್ಲಿ ಜೋಡಿಸಿ ಇಡಲಾಗಿತ್ತು. ಆದರೆ, ಅದರಲ್ಲಿ ಯಾವುದೇ ಸ್ಫೋಟಕ ವಸ್ತು ಇರಲಿಲ್ಲ. ಘಟನೆ ಸಂಬಂಧ ಸ್ಫೋಟಕ ಕಾಯ್ದೆ 4 ಮತ್ತು 5ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ದೇವರಾಜು ತಿಳಿಸಿದ್ದಾರೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
ಬಾಂಬ್ ರೀತಿಯ ವಸ್ತು ಪತ್ತೆಯಾದ ಸ್ಥಳದ ಸಮೀಪದಲ್ಲೇ ಕುಮಟಾ ರೈಲ್ವೇ ನಿಲ್ದಾಣ ಇತ್ತು. ಹೀಗಾಗಿ ಯಾರೋ ಉದ್ದೇಶಪೂರ್ವಕ ಬಾಂಬ್ ಇಟ್ಟಿದ್ದಾರೆಂದು ಸಂಶಯಪಡಲಾಗಿತ್ತು. ಸಂಜೆಯೇ ಪೊಲೀಸರನ್ನು ನಿಯೋಜಿಸಿ, ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿತ್ತು. ಇದರಿಂದಾಗಿ ಕುಮಟಾದಲ್ಲಿ ಭಯದ ವಾತಾವರಣ ಉಂಟಾಗಿತ್ತು. ಸ್ಥಳೀಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳೇ ಕಿಡಿಗೇಡಿ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಮಟಾದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆ ! ಸ್ಥಳೀಯರಲ್ಲಿ ಆತಂಕ, ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ರವಾನೆ
A suspected improvised explosive device (IED) was been found in a wooded area near the Kumta Railway station on Wednesday evening, creating panic among the locals is said to be dummy.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am