ಬ್ರೇಕಿಂಗ್ ನ್ಯೂಸ್
03-11-21 11:20 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕಳ್ಳರು ಪೊಲೀಸರನ್ನು ಕಂಡರೆ ಓಡಿ ತಪ್ಪಿಸಿಕೊಳ್ಳೋದು ಕೇಳಿದ್ದೇವೆ. ಆದರೆ, ಇಲ್ಲೊಬ್ಬ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿದ್ದಾತನೇ ಪೊಲೀಸರನ್ನು ಕಂಡು ಓಡಿಹೋದ ಘಟನೆ ನಡೆದಿದೆ.
ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದನ್ನು ತಿಳಿದು ಲಂಚಕೋರ ಪಿಎಸ್ಐ ಓಡಿ ತಪ್ಪಿಸಿಕೊಂಡಿದ್ದಾನೆ. ಓಡಿ ಹೋದ ಪೊಲೀಸ್ ಪೇದೆ ಮತ್ತು ಎಸ್ಐ ಅವರನ್ನು ಹಿಡಿಯಲು ಸಾರ್ವಜನಿಕರೇ ಸೇರಿ ಬೆನ್ನತ್ತಿದ್ದಾರೆ.

ಗುಬ್ಬಿ ತಾಲೂಕಿನ ಸಿ.ಎಸ್.ಪುರ ಠಾಣೆಯ ಪಿ.ಎಸ್.ಐ ಸೋಮಶೇಖರ್ ಓಡಿ ತಪ್ಪಿಸಿಕೊಂಡು ಬಳಿಕ ಸಿಕ್ಕಿಬಿದ್ದಿದ್ದಾನೆ. ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಈ ನಡುವೆ ಅಧಿಕಾರಿಗಳು ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಪಿಎಸ್ಐ ಠಾಣೆಯಿಂದ ಬೈಕ್ ಏರಿ ಪರಾರಿಯಾಗಿದ್ದಾನೆ. ಮೊಬೈಲ್ ಫೋನ್ ಜೊತೆಗೆ ಪಿಎಸ್ಐ ಪರಾರಿಯಾಗಿದ್ದು ಆಬಳಿಕ ಜನ್ನೇನಹಳ್ಳಿ ಎಂಬಲ್ಲಿ ಸಿಕ್ಕಿಬಿದ್ದಿದ್ದಾನೆ. ಈ ನಡುವೆ, ಹಿಂದಿನಿಂದಲೇ ಅಧಿಕಾರಿಗಳು ಬೆನ್ನಟ್ಟಿದ್ದು , ಪಿಎಸ್ಐ ಸೋಮಶೇಖರ್ ನಡುದಾರಿಯಲ್ಲಿ ಯುನಿಫಾರ್ಮ್ ಬಿಚ್ಚಿ ಅರೆ ಬೆತ್ತಲಾಗಿ ಓಡಿದ್ದಾನೆ. ಕೊನೆಗೆ, ಅಧಿಕಾರಿಗಳು ಮತ್ತು ಸಾರ್ವಜನಿಕರು ಸೇರಿ ಪಿಎಸ್ಐ ನನ್ನು ಬಂಧಿಸಿದ್ದು ಹೊಸ ಬಟ್ಟೆ ಕೊಡಿಸಿ ಮರಳಿ ಠಾಣೆಗೆ ಕರೆತಂದಿದ್ದಾರೆ.



ಕೌಟುಂಬಿಕ ಕಲಹದ ವಿಚಾರವಾಗಿ ಸಿ.ಎಸ್ ಪುರ ಠಾಣೆಯಲ್ಲಿ ಚಂದ್ರಣ್ಣ ಎಂಬಾತನ ವಿರುದ್ಧ ದೂರು ದಾಖಲಾಗಿತ್ತು. ಕಳೆದ ತಿಂಗಳು 22ರಂದು ದೂರು ದಾಖಲಾಗಿದ್ದು ವಿಚಾರಣೆ ನಡೆಸಿ ಬಿಟ್ಟಿದ್ದರು. ಇದೇ ವೇಳೆ, ಆತನ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಕೋರ್ಟ್ ನಲ್ಲಿ ಜಾಮೀನು ಪಡೆದ ಬಳಿಕ ಚಂದ್ರಣ್ಣ ಕಾರು ಬಿಡಿಸಿಕೊಳ್ಳಲು ಬಂದಿದ್ದ. ಆದರೆ ಕಾರು ಬಿಟ್ಟುಕೊಡಲು ಪಿಎಸ್ಐ ಸೋಮಶೇಖರ್, 28 ಸಾವಿರ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದ. ಠಾಣೆಯ ಮುಖ್ಯ ಪೇದೆ ನಯಾಜ್ ಅಹಮದ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದ. ಈ ನಡುವೆ, 12 ಸಾವಿರ ಲಂಚವನ್ನೂ ಪಡೆದಿದ್ದು ಉಳಿದ 16 ಸಾವಿರ ಹಣವನ್ನು ಇಂದು ನೀಡುತ್ತಿದ್ದಾಗಲೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಿಎಸ್ಐ ಲಂಚ ಬೇಡಿಕೆ ಇಟ್ಟಿದ್ದ ಬಗ್ಗೆ ಚಂದ್ರಣ್ಣ ಎಸಿಬಿಗೆ ದೂರು ನೀಡಿದ್ದು ಎಸಿಬಿ ಇನ್ಸ್ ಪೆಕ್ಟರ್ ವಿಜಯಲಕ್ಷ್ಮೀ ನೇತೃತ್ವದಲ್ಲಿ ನಡೆದ ದಾಳಿ ನಡೆಸಲಾಗಿತ್ತು.
Tumkuru ACB raid on Police Sub Inspector runs throwing uniform to escape arrest. PSI was alleged of corruption charges and when ACB came to arrest him he flee from the spot throwing his uniform but finally he was arrested.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm