ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm