ಬ್ರೇಕಿಂಗ್ ನ್ಯೂಸ್
08-11-21 05:20 pm Bengaluru Correspondent ಕರ್ನಾಟಕ
ಬೆಂಗಳೂರು, ನ.8: ಬಿಟ್ ಕಾಯಿನ್ ಹಗರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಯಾರೆಲ್ಲ ಆರೋಪಿಗಳಿದ್ದಾರೆ. ಎಷ್ಟು ಮಂದಿ ಆಡಳಿತ ಪಕ್ಷದವರು ಇದ್ದಾರೆ ಎಂದು ತನಿಖೆ ನಡೆಸಿ ಸರ್ಕಾರವೇ ತಪ್ಪಿತಸ್ಥರ ಹೆಸರು ಹೇಳಲಿ ಎಂದು ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಸವಾಲು ಹಾಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಬಳಿ ಅಧಿಕಾರವಿದೆ. ತನಿಖಾ ಸಂಸ್ಥೆಗಳಿವೆ. ಆರೋಪಗಳ ಬಗ್ಗೆ ತನಿಖೆ ನಡೆಸಲಿ. ತಪ್ಪಿತಸ್ಥರು ಯಾರು ಎಂದು ಸರ್ಕಾರವೇ ಹೆಸರುಗಳನ್ನು ಹೇಳಲಿ ಎಂದು ಹೇಳಿದರು.
ಸರ್ಕಾರಗಳು ಜಾತಿ ಆಧಾರದಲ್ಲಿ ತಾರತಮ್ಯ ಮಾಡುತ್ತಿದೆ. ಜಾತಿ ಜಾತಿಗಳ ನಡುವೆ ವೈಮನಸ್ಸು ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಜಾತ್ಯತೀತ ತತ್ವದಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಕಾಂಗ್ರೆಸ್ ಪಕ್ಷ ಮಾತ್ರ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ.
ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದಲ್ಲಿ ನ್ಯಾಯ ಸಿಕ್ಕಿಲ್ಲ ಎಂಬ ಇಬ್ರಾಹಿಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಹ್ಯಾರಿಸ್ ಅವರು, ಅದು ಇಬ್ರಾಹಿಂ ಅವರ ವೈಯಕ್ತಿಕ ಅಭಿಪ್ರಾಯ. ನಮಗೆಲ್ಲ ಕಾಂಗ್ರೆಸ್ ಪಕ್ಷದಲ್ಲಿ ನ್ಯಾಯ ಸಿಕ್ಕಿದೆ. ಅಲ್ಪಸಂಖ್ಯಾತರಿಗೆ ಅನ್ಯಾಯ ಆಗಿಲ್ಲ. ಕೆಲವು ವ್ಯಕ್ತಿಗಳಿಗೆ ಹೆಚ್ಚು ಕಡಿಮೆ ಆಗಿರಬಹುದು. ಆದರೆ ಪಕ್ಷದಿಂದ ಅನ್ಯಾಯವಾಗಿಲ್ಲ ಎಂದರು.
ಇಬ್ರಾಹಿಂ ಕಾಂಗ್ರೆಸ್ನಿಂದ ಕಾಲು ಹೊರ ತೆಗೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೈ ಅವರದು ಕಾಲು ಅವರದು. ಎಲ್ಲಿಯಾದರೂ ಇಟ್ಕೊಳ್ಳಲಿ. ಕಾಂಗ್ರೆಸ್ ಎಲ್ಲರನ್ನೂ ಸರಿಸಮವಾಗಿ ನೋಡಿಕೊಂಡಿದೆ. ನಮ್ಮಲ್ಲಿ ಮಾತನಾಡಲು ಮುಕ್ತ ವಾತಾವರಣವಿದೆ. ಹಾಗಾಗಿ ಎಲ್ಲರೂ ಹೇಳಿಕೆ ನೀಡುತ್ತಾರೆ. ಬೇರೆ ಪಕ್ಷದಲ್ಲಿ ಅಂತಹ ವಾತಾವರಣ ಇಲ್ಲ ಎಂದರು.
Karnataka Bitcoin scam Let govt investigate those involved states MLA Haris. The Bengaluru Police on Saturday detained Srikrishna Ramesh alias Srikky, the hacker who is at the centre of the alleged Karnataka Bitcoin scam, after he was involved in a brawl inside a hotel in the city. According to the police, Srikky got into an argument with a person named Vishnu Bhat and the hotel staff after which Vishnu allegedly attacked him. The hotel officials called the police following which Srikky and Vishnu Bhat were detained.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm