ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am