ಬ್ರೇಕಿಂಗ್ ನ್ಯೂಸ್
12-09-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 12: ಜೆಡಿಎಸ್ ಪಕ್ಷದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಶ್ರೀಲಂಕಾ ಪ್ರವಾಸ ಹೋಗಿದ್ದು ನಿಜ. ಹಾಗೆಂದು ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿಯರ ಜೊತೆ ಕೊಲಂಬೋಗೆ ಹೋಗಿದ್ದೆ ಎಂದು ಹೇಳಿಕೆ ನೀಡಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಯಾಗಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಒಂದಾನೊಂದು ಕಾಲದಲ್ಲಿ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋಗೆ ಪ್ರವಾಸ ಹೋಗಿದ್ದಾಗಿ ಹೇಳಿಕೆ ನೀಡಿದ್ದು ಎತ್ತಣ ಮಾಮರ, ಎತ್ತಣ ಕೋಗಿಲೆ ಎಂಬಂತಾಗಿದೆ ಎಂದಿದ್ದಾರೆ.

2014ರ ಜೂನ್ ತಿಂಗಳಲ್ಲಿ ಪಕ್ಷದ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಶ್ರೀಲಂಕಾಗೆ ಹೋಗುವುದಾಗಿ ಬಹಿರಂಗವಾಗೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದಲ್ಲದೆ, ಅಲ್ಲಿ ಶಾಸಕರ ಜೊತೆ ನಡೆದ ಮಾತುಕತೆಗಳ ಬಗ್ಗೆ ದೃಶ್ಯಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ. ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಚರ್ಚಿಸಲು ಕೊಲಂಬೋಗೆ ಹೋಗುವುದು ದುಬಾರಿಯಲ್ಲದ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಅದೇ ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿದ್ದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿ ಕೊಂಡಿರುವುಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಎಂದು ಪುರಂದರದಾಸರ ಕೀರ್ತನೆಯನ್ನು ಉಲ್ಲೇಖಿಸಿ ಜಮೀರ್ ಅಹ್ಮದ್ ವಿರುದ್ಧ ಜಾಡಿಸಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜೊತೆ ಲಿಂಕ್ ಹೊಂದಿರುವ ಆರೋಪ ಜಮೀರ್ ಅಹ್ಮದ್ ಮೇಲೆ ಕೇಳಿಬರುತ್ತಿದ್ದಂತೆ ಕೊಲಂಬೋಗೆ ಹೋಗಿರುವ ವಿಚಾರದಲ್ಲಿ ಕುಮಾರಸ್ವಾಮಿಯನ್ನು ಎಳೆತರಲು ಪ್ರಯತ್ನ ಮಾಡಿದ್ದರು.
ಆಚಾರವಿಲ್ಲದ ನಾಲಿಗೆ ನಿನ್ನ
— H D Kumaraswamy (@hd_kumaraswamy) September 12, 2020
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ
ಚಾಚಿ ಕೊಂಡಿರುವಂತ ನಾಲಿಗೆ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲು ಬೇಡ ನಾಲಿಗೆ
ಪುರಂದರ ದಾಸರು
6/6
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm