ಬ್ರೇಕಿಂಗ್ ನ್ಯೂಸ್
15-11-21 09:45 pm H.K, Bengaluru Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಸೂತ್ರಧಾರ ಎನ್ನಲಾದ ಶ್ರೀಕಿಯ ಜೀವಕ್ಕೆ ಆಪತ್ತು ಇದ್ದು ಆತನಿಗೆ ಪೊಲೀಸ್ ಭದ್ರತೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ವಿಶ್ವಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಿಗಳು ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗೆ ಭದ್ರತೆ ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶ್ರೀಕಿಗೆ ಮಾದಕ ವಸ್ತು ಚಟ ಇದ್ದುದನ್ನು ಹೇಳಲಾಗಿದೆ. ಈ ಸಮಯದಲ್ಲಿ ಶ್ರೀಕಿ ತಂದೆಯೇ ಪತ್ರ ಬರೆದು ತನ್ನ ಮಗನಿಗೆ ಪೊಲೀಸರು ಡ್ರಗ್ಸ್ ನೀಡಿದ್ದರು ಎಂದು ಆರೋಪಿಸಿದ್ದರು.

ಬಿಟ್ ಕಾಯಿನ್ ಹಗರಣ ಸ್ಫೋಟಗೊಂಡ ನಂತರ ಸಣ್ಣಮಟ್ಟದ ಆರೋಪದ ಮೇಲೆ ನಾಟಕೀಯ ರೀತಿಯಲ್ಲಿ ನಡೆದಿರುವ ಶ್ರೀಕೃಷ್ಣನ ಬಂಧನ, ಅಷ್ಟೇ ನಾಟಕೀಯವಾಗಿ ಜಾಮೀನು ಮೇಲೆ ಬಿಡುಗಡೆಯಾಗಿರುವುದು ಪೊಲೀಸರ ನಡವಳಿಕೆಗಳ ಬಗ್ಗೆ ಸಂಶಯಗಳಿಗೆ ಕಾರಣವಾಗಿದೆ ಎಂದವರು ಹೇಳಿದ್ದಾರೆ.
ಶ್ರೀಕಿ ಈಗಲೂ ಡ್ರಗ್ಸ್ ವ್ಯಸನಿಯೇ ? ಡ್ರಗ್ಸ್ ವ್ಯಸನಿಯಾಗಿದ್ದರೆ ಚಿಕಿತ್ಸೆ ನೀಡಲಾಗಿದೆಯೇ ? ಈ ಬಾರಿ ಬಂಧಿಸಿದಾಗ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆಯೇ ? ಈ ಬಗ್ಗೆ ರಾಜ್ಯದ ಗೃಹ ಸಚಿವರು ಮಾಹಿತಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಬಿಟ್ ಕಾಯಿನ್ ಹಗರಣ ತಂತ್ರಜ್ಞಾನ ಅವಲಂಬಿತ ಬಿಳಿ ಕಾಲರ್ ಅಪರಾಧ. ಹ್ಯಾಕ್ ಮಾಡಿರುವುದು, ಸಂಬಂಧಿತ ದಾಖಲೆಗಳ ಪಾಸ್ ವರ್ಡ್ ಇತ್ಯಾದಿ ಆತನ ನೆನಪಲ್ಲಿ ಮಾತ್ರ ಇದೆ, ಲಿಖಿತ ದಾಖಲೆಗಳಿಲ್ಲ ಎಂದು ಹೇಳಲಾಗುತ್ತದೆ. ಹೀಗಾಗಿ ಶ್ರೀಕಿಯ ಪ್ರಾಣಕ್ಕೆ ಅಪಾಯ ಸಾಧ್ಯತೆ ಇದೆ ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
In a startling demand, Karnataka Leader of the Opposition Siddaramaiah on Monday asked the BJP government to provide security to hacker Srikrishna, suggesting that his life could be in danger.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm