ಬ್ರೇಕಿಂಗ್ ನ್ಯೂಸ್
16-11-21 12:40 pm HK News Desk ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ವಿಚಾರ ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷರು ಮೌನವಾಗಿರುವುದನ್ನು ನೋಡಿದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮಾಸ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.
ಹಗರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೆಸರು ಕೇಳಿಬರುತ್ತಿದ್ದರೂ ಈ ಬಗ್ಗೆ ಯಾರು ಕೂಡ ಸ್ಪಷ್ಟನೆ ನೀಡಿಲ್ಲ. ಸ್ವತಃ ರಾಜ್ಯ ಬಿಜೆಪಿ ಅಧ್ಯಕ್ಷರು ಕೂಡ ಯಾವುದೇ ಮಾತನ್ನು ಆಡಿಲ್ಲ. ಇದೇ ವಿಚಾರದಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು. ಇಲ್ಲದಿದ್ದರೆ ಅವರ ನಿಗೂಢ ಮೌನದ ಬಗ್ಗೆ ಜನರು ತಪ್ಪು ತಿಳಿಯಬಹುದು ಎಂದು ಟೀಕಿಸಿದ್ದಾರೆ.
ಕಳೆದ ಒಂದು ವಾರದಲ್ಲಿ ಕಾಂಗ್ರೆಸ್ ನಾಯಕರು ಬಿಟ್ ಕಾಯಿನ್ ಹಗರಣದ ಬಗ್ಗೆ ಭಾರೀ ಗುಲ್ಲು ಎಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಬಿಜೆಪಿ ಕಾರ್ಯಕರ್ತ ಸಚಿನ್ ಮಾಮನಿ ಎಂಬವರು ಪ್ರಧಾನಿಗೆ ಬರೆದಿರುವ ಪತ್ರವನ್ನು ಆಧರಿಸಿ ಸಿಎಂ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಹೆಸರನ್ನು ಪ್ರಮುಖವಾಗಿ ಎತ್ತಿದ್ದಾರೆ. ನಳಿನ್ ಕುಮಾರ್ ಕಟೀಲ್ ಗೆ 70 ಕೋಟಿ ನೀಡಲಾಗಿದೆ ಎನ್ನುವ ವಿಚಾರವನ್ನು ಹೇಳಿಕೊಂಡಿದ್ದರು. ಈ ರೀತಿಯ ಆರೋಪ ಕೇಳಿಬಂದಿದ್ದರೂ, ಬಿಜೆಪಿ ನಾಯಕರು ಆ ಬಗ್ಗೆ ಹಾರಿಕೆಯ ಉತ್ತರ ನೀಡಿದ್ದು ಬಿಟ್ಟರೆ ಯಾವುದೇ ಖಚಿತ ಮಾಹಿತಿಗಳನ್ನು ಬಿಟ್ಟುಕೊಟ್ಟಿಲ್ಲ.
ಇದೇ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ, ಬಿಜೆಪಿ ಅಧ್ಯಕ್ಷರ ಹೆಸರೆತ್ತಿ ನಿಗೂಢ ಮೌನದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.
ಬಿಟ್ಕಾಯಿನ್ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಮೌನವಾಗಿರುವುದನ್ನು ನೋಡಿ ನನಗೆ ಆಶ್ಚರ್ಯವಾಗಿದೆ!
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) November 15, 2021
ಆಡಳಿತ ಪಕ್ಷದ ಅಧ್ಯಕ್ಷರಾಗಿ ಅವರಿಗೆ ಬಿಟ್ ಕಾಯಿನ್ ವಿಚಾರದಲ್ಲಿ ಸಾಕಷ್ಟು ಮಾಹಿತಿ ಇರುತ್ತದೆ ಎಂದು ನನಗೆ ಖಾತ್ರಿಯಿದೆ. ಅವರು ತಮ್ಮ ಮೌನ ಮುರಿಯಬೇಕು ಇಲ್ಲವಾದಲ್ಲಿ ಅವರ 'ನಿಗೂಢ ಮೌನ'ದ ಬಗ್ಗೆ ಜನರು ತಪ್ಪು ತಿಳಿಯಬಹುದು.
BJP Bitcoin scam Priyank Kharge questions the silence of BJP President Nalin Kateel. Now, in another exclusive, one of his main partners in crime, Robin Khandelwal's account of his escapades with Sriki, will be detailed in this story. Furthermore, while going through the charge sheet, we also found how the Nalapad brothers are associated with Sriki.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm