ಬ್ರೇಕಿಂಗ್ ನ್ಯೂಸ್
16-11-21 01:45 pm Bengaluru Correspondent ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ವಾರ್ ಮುಂದುವರಿಸಿದ್ದಾರೆ. ಕಾಂಗ್ರೆಸ್ ಆರೋಪಕ್ಕೆ ದಾಖಲೆ ಇದ್ದರೆ ನೀಡಲಿ ಎಂದಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಸು ದಾಖಲಾಗಿದ್ದು ಬಿಜೆಪಿ ಸರಕಾರದಲ್ಲಿ. ಆತನನ್ನು ಎರಡು ಬಾರಿ ಬಂಧಿಸಿದ್ದು ಬೇಲ್ ಮೇಲೆ ಬಿಡುಗಡೆ ಮಾಡಿಸಿದ್ದು , ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರಕಾರ. ಹಾಗಿದ್ದ ಮೇಲೆ ಈಗಿನ ಸರಕಾರವೇ ದಾಖಲೆ ನೀಡಬೇಕು. ಅದಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಸಿದ್ದರಾಮಯ್ಯ ನೇರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಸರಕಾರದ ಅವಧಿಯಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ಮಾಡಿಲ್ಲ ಅಂತ ಕೇಳುತ್ತಿದ್ದೇನೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ಬಿಟ್ ಕಾಯಿನ್ ವಿಚಾರ ವರದಿಯಾಗಿತ್ತೇ.. ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೇ.. ಆ ಕಾಲದಲ್ಲಿಯೇ ಇವರಿಗೆ ಇದು ಗೊತ್ತಿತ್ತೇ.. ಗೊತ್ತಿದ್ದರೆ ಮುಚ್ಚಿಟ್ಟಿದ್ದರೇ ಎಂದು ಪ್ರಶ್ನೆ ಮಾಡಿದ್ದಾರೆ.
ಮೊದಲ ಬಾರಿಗೆ ಶ್ರೀಕಿ ಬಂಧನ ಆಗಿದ್ದಾಗ, ಜಾಮೀನು ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬೊಮ್ಮಾಯಿ. ಅವರೇ ಉತ್ತರ ನೀಡಬೇಕು. ಅಶೋಕ್ ಅವರಿಗ್ಯಾಕೆ ಈ ಬಗ್ಗೆ ಆಸಕ್ತಿ ಎಂದು ಕಟಕಿಯಾಡಿದ್ದಾರೆ. ರಾಜ್ಯ ಸರಕಾರದ ಬಗ್ಗೆ ಸಮರ್ಥಿಸಿ, ಸಚಿವ ಅಶೋಕ್ ಹೇಳಿಕೆ ನೀಡಿದ್ದರು.
The whole episode surrounding the investigation of #Bitcoin scam has raised several doubts.
— Siddaramaiah (@siddaramaiah) November 15, 2021
The dramatic arrest of SriKrishna & his release on bail under suspicious circumstances raises questions about the conduct of police.@CMofKarnataka#Bitcoin
ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನು ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ @BSBommai. @RAshokaBJP ಅವರಿಗ್ಯಾಕೆ ಇಷ್ಟೊಂದು ಆಸಕ್ತಿ? 1/4#Bitcoin
— Siddaramaiah (@siddaramaiah) November 15, 2021
ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ?
— Siddaramaiah (@siddaramaiah) November 15, 2021
ಯಾರಾದರೂ @BJP4Karnataka ನಾಯಕರು ಪ್ರಸ್ತಾಪ ಮಾಡಿದ್ದರೆ?
ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ?
ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ? 2/4#Bitcoin
ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು @BJP4Karnataka ಕಾಲದಲ್ಲಿ.
— Siddaramaiah (@siddaramaiah) November 15, 2021
ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ. 3/4 #Bitcoin
ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು @BJP4Karnataka ಸರ್ಕಾರ. ಹೀಗಾಗಿ @BSBommai ಅವರೇ ಮಾಹಿತಿ ಕೊಡಬೇಕು.
— Siddaramaiah (@siddaramaiah) November 15, 2021
ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ. 4/4#Bitcoin
BJP arrested Sriki so give us information or else quit from your position slama Siddaramaiah. Former Karnataka chief minister Siddaramaiah on Monday asked the Basavaraj Bommai-led Bharatiya Janata Party (BJP) government to provide protection to Srikrishna or Sriki, the person at the heart of the raging Bitcoin scandal, stating that the latter’s life could be in danger.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 02:30 pm
Mangalore Correspondent
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am