ಬ್ರೇಕಿಂಗ್ ನ್ಯೂಸ್
18-11-21 12:46 pm Hk Desk, Bengaluru ಕರ್ನಾಟಕ
ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ನಲ್ಲಿ ಬಡಿದಾಟ ಆರಂಭವಾಗಿದ್ದು, ಈಗಾಗಲೇ ಎರಡು ಬಣಗಳಿವೆ. ಕಾಂಗ್ರೆಸ್ ಬಡಿದಾಟದ ಕುರಿತು ಟೀಕೆ, ಟಿಪ್ಪಣಿ ಮಾಡುವುದಕ್ಕೆ ಹೋಗುವುದಿಲ್ಲ. ಪ್ರತಿಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.
ಹ್ಯಾಕರ್ ಶ್ರೀಕಿ ಮಿಸ್ಸಿಂಗ್ ;
ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಜೀವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕರು ಕಳೆದ ಒಂದು ವಾರದಿಂದ ಹೇಳುತ್ತಿದ್ದರೂ ರಾಜ್ಯ ಸರಕಾರ ಕಿವಿಗೆ ಹಾಕ್ಕೊಂಡಿರಲಿಲ್ಲ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಜ್ಯ ಸರಕಾರ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲು ಸೂಚನೆ ನೀಡಿದೆ. ಆದರೆ, ಇತ್ತ ಪೊಲೀಸರು ಭದ್ರತೆ ನೀಡಲು ಹೋದರೆ ಶ್ರೀಕಿಯೇ ಕಾಣೆಯಾಗಿದ್ದಾನೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಬೆಳಗ್ಗೆ ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದರು. ಕೂಡಲೇ ಶ್ರೀಕಿಯ ಮನೆಗೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ತೆರಳಿದ್ದು, ಅಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಶ್ರೀಕಿ ಎಲ್ಲಿದ್ದಾನೆಂದು ಮನೆಯವರಿಗೇ ಗೊತ್ತಿಲ್ಲ. ಹೀಗಾಗಿ ಪೊಲೀಸರು ಶ್ರೀಕಿ ಪತ್ತೆಗಾಗಿ ತೀವ್ರ ತಲೆಕೆಡಿಸಿಕೊಂಡಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಸರಕಾರದ ಬಿಜೆಪಿ ಪ್ರಭಾವಿಗಳು ಇದ್ದಾರೆಂಬ ಮಾಹಿತಿಗಳು ಈಗಾಗ್ಲೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ. ಈ ನಡುವೆ, ಆರೋಪಿಯೆಂದು ಗುರುತಿಸಲ್ಪಟ್ಟಿರುವ ಶ್ರೀಕಿಯೇ ನಾಪತ್ತೆಯಾಗಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಶ್ರೀಕಿ ಬಾಯಿಬಿಟ್ರೆ ದೊಡ್ಡ ನಾಯಕರಿಗೆ ಆಪತ್ತು ಎದುರಾಗುವುದು ಖಚಿತ ಎನ್ನಲಾಗುತ್ತಿರುವ ಮಧ್ಯೆಯೇ ಆತನ ನಾಪತ್ತೆ ಮತ್ತೊಂದು ಶಾಕ್ ನೀಡಿದೆ.
ಈಗಾಗ್ಲೇ ಪ್ರಕರಣದ ಸಾಕ್ಷ್ಯಗಳನ್ನು ಶ್ರೀಕಿ ಪೂರ್ತಿಯಾಗಿ ಕ್ರಾಷ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಮತ್ತೆ ರಿಟ್ರೀವ್ ಮಾಡಿದರೆ ಆಪತ್ತು ಎದುರಾಗುವ ಸಾಧ್ಯತೆಗಳಿವೆ ಎನ್ನುವ ಆತಂಕದಿಂದ ರಾಜಕೀಯ ಪ್ರಭಾವಿಗಳೇ ಸೇರಿ ಆತನನ್ನು ಮುಗಿಸಲು ಸಂಚು ಹೂಡಿದ್ದಾರೆಂಬ ಅನುಮಾನಗಳು ಕಳೆದ ಕೆಲವು ದಿನಗಳಿಂದ ಕೇಳಿಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕರು ಪದೇ ಪದೇ ಸರಕಾರವನ್ನು ಎಚ್ಚರಿಸಿದ್ದರು. ಈಗ ಪ್ರಾಣಾಪಾಯದ ಭೀತಿಯಲ್ಲಿ ಸ್ವತಃ ಶ್ರೀಕಿಯೇ ತಲೆಮರೆಸಿಕೊಂಡಿದ್ದಾನೆಯೇ, ಯಾರಾದ್ರೂ ಆತನನ್ನು ಬಚ್ಚಿಟ್ಟಿದ್ದಾರೆಯೇ ಎನ್ನುವ ಅನುಮಾನವೂ ಮೂಡಿದೆ.
Bitcoin scam, action to be taken by PM Modi on all those involved if proved states Yediyurapp in Hubli.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm