ಬ್ರೇಕಿಂಗ್ ನ್ಯೂಸ್
18-11-21 12:46 pm Hk Desk, Bengaluru ಕರ್ನಾಟಕ
ಹುಬ್ಬಳ್ಳಿ: ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ತಪ್ಪಿತಸ್ಥರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ನಲ್ಲಿ ಬಡಿದಾಟ ಆರಂಭವಾಗಿದ್ದು, ಈಗಾಗಲೇ ಎರಡು ಬಣಗಳಿವೆ. ಕಾಂಗ್ರೆಸ್ ಬಡಿದಾಟದ ಕುರಿತು ಟೀಕೆ, ಟಿಪ್ಪಣಿ ಮಾಡುವುದಕ್ಕೆ ಹೋಗುವುದಿಲ್ಲ. ಪ್ರತಿಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದು ಬಿಎಸ್ವೈ ತಿಳಿಸಿದರು.
ಹ್ಯಾಕರ್ ಶ್ರೀಕಿ ಮಿಸ್ಸಿಂಗ್ ;
ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಜೀವಕ್ಕೆ ಅಪಾಯವಿದೆ ಎಂದು ಕಾಂಗ್ರೆಸ್ ನಾಯಕರು ಕಳೆದ ಒಂದು ವಾರದಿಂದ ಹೇಳುತ್ತಿದ್ದರೂ ರಾಜ್ಯ ಸರಕಾರ ಕಿವಿಗೆ ಹಾಕ್ಕೊಂಡಿರಲಿಲ್ಲ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ರಾಜ್ಯ ಸರಕಾರ ಶ್ರೀಕಿಗೆ ಪೊಲೀಸ್ ಭದ್ರತೆ ನೀಡಲು ಸೂಚನೆ ನೀಡಿದೆ. ಆದರೆ, ಇತ್ತ ಪೊಲೀಸರು ಭದ್ರತೆ ನೀಡಲು ಹೋದರೆ ಶ್ರೀಕಿಯೇ ಕಾಣೆಯಾಗಿದ್ದಾನೆ.
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಬೆಳಗ್ಗೆ ಶ್ರೀಕಿ ಭದ್ರತೆಗಾಗಿ ಸಬ್ ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಯೊಬ್ಬರನ್ನು ನಿಯೋಜಿಸಿ ಆದೇಶ ಹೊರಡಿಸಿದ್ದರು. ಕೂಡಲೇ ಶ್ರೀಕಿಯ ಮನೆಗೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸರು ತೆರಳಿದ್ದು, ಅಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಶ್ರೀಕಿ ಎಲ್ಲಿದ್ದಾನೆಂದು ಮನೆಯವರಿಗೇ ಗೊತ್ತಿಲ್ಲ. ಹೀಗಾಗಿ ಪೊಲೀಸರು ಶ್ರೀಕಿ ಪತ್ತೆಗಾಗಿ ತೀವ್ರ ತಲೆಕೆಡಿಸಿಕೊಂಡಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಸರಕಾರದ ಬಿಜೆಪಿ ಪ್ರಭಾವಿಗಳು ಇದ್ದಾರೆಂಬ ಮಾಹಿತಿಗಳು ಈಗಾಗ್ಲೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದೆ. ಈ ನಡುವೆ, ಆರೋಪಿಯೆಂದು ಗುರುತಿಸಲ್ಪಟ್ಟಿರುವ ಶ್ರೀಕಿಯೇ ನಾಪತ್ತೆಯಾಗಿದ್ದು, ತೀವ್ರ ಸಂಚಲನ ಸೃಷ್ಟಿಸಿದೆ. ಶ್ರೀಕಿ ಬಾಯಿಬಿಟ್ರೆ ದೊಡ್ಡ ನಾಯಕರಿಗೆ ಆಪತ್ತು ಎದುರಾಗುವುದು ಖಚಿತ ಎನ್ನಲಾಗುತ್ತಿರುವ ಮಧ್ಯೆಯೇ ಆತನ ನಾಪತ್ತೆ ಮತ್ತೊಂದು ಶಾಕ್ ನೀಡಿದೆ.
ಈಗಾಗ್ಲೇ ಪ್ರಕರಣದ ಸಾಕ್ಷ್ಯಗಳನ್ನು ಶ್ರೀಕಿ ಪೂರ್ತಿಯಾಗಿ ಕ್ರಾಷ್ ಮಾಡಿದ್ದಾನೆ ಎನ್ನಲಾಗುತ್ತಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಮತ್ತೆ ರಿಟ್ರೀವ್ ಮಾಡಿದರೆ ಆಪತ್ತು ಎದುರಾಗುವ ಸಾಧ್ಯತೆಗಳಿವೆ ಎನ್ನುವ ಆತಂಕದಿಂದ ರಾಜಕೀಯ ಪ್ರಭಾವಿಗಳೇ ಸೇರಿ ಆತನನ್ನು ಮುಗಿಸಲು ಸಂಚು ಹೂಡಿದ್ದಾರೆಂಬ ಅನುಮಾನಗಳು ಕಳೆದ ಕೆಲವು ದಿನಗಳಿಂದ ಕೇಳಿಬಂದಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕರು ಪದೇ ಪದೇ ಸರಕಾರವನ್ನು ಎಚ್ಚರಿಸಿದ್ದರು. ಈಗ ಪ್ರಾಣಾಪಾಯದ ಭೀತಿಯಲ್ಲಿ ಸ್ವತಃ ಶ್ರೀಕಿಯೇ ತಲೆಮರೆಸಿಕೊಂಡಿದ್ದಾನೆಯೇ, ಯಾರಾದ್ರೂ ಆತನನ್ನು ಬಚ್ಚಿಟ್ಟಿದ್ದಾರೆಯೇ ಎನ್ನುವ ಅನುಮಾನವೂ ಮೂಡಿದೆ.
Bitcoin scam, action to be taken by PM Modi on all those involved if proved states Yediyurapp in Hubli.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm