ಬ್ರೇಕಿಂಗ್ ನ್ಯೂಸ್
12-09-20 11:03 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 12: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಕೊರೊನಾ ವಾರಿಯರ್ ಉದ್ಘಾಟಿಸಲಿದ್ದಾರೆ. ಅ.17 ರಂದು ಬೆಳಿಗ್ಗೆ 7:45 ರಿಂದ 8:15 ರೊಳಗಿನ ಮುಹೂರ್ತದಲ್ಲಿ ದಸರಾ ಉತ್ಸವ ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿದೆ.
ಈ ಬಾರಿ ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಈ ಕುರಿತು ಮೈಸೂರು ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ಇಂದು ನಡೆಯಿತು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಅಕ್ಟೋಬರ್ 2 ರಂದು ಮಧ್ಯಾಹ್ನ ದಸರಾ ಗಜಪಡೆಯನ್ನು ಮೈಸೂರು ಅರಮನೆ ಆವರಣಕ್ಕೆ ಸ್ವಾಗತಿಸಲಾಗುವುದು. ಪ್ರತಿ ವರ್ಷದಂತೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಈ ಸಲ ಇರುವುದಿಲ್ಲ. ಈ ಬಾರಿ ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆ ಆಗಮನವಾಗಲಿದೆ.
ವಿಶೇಷ ಅಂದ್ರೆ ಈ ಬಾರಿ ಕೊರೊನಾ ವಾರಿಯರ್ಸ್ ಸೇರಿ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆ ಮಾಡಲಿದ್ದಾರೆ. ಐವರು ಕೊರೊನಾ ವಾರಿಯರ್ಸ್ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಕೂಡ ಸೇರಿಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಬಾರಿ ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಮೆರವಣಿಗೆ ನಡೆಯಲಿದ್ದು ಈ ಬಾರಿಯ ಮೆರವಣಿಗೆಯಲ್ಲಿ ಅಭಿಮನ್ಯು ಆನೆ ಚಿನ್ನದ ಅಂಬಾರಿ ಹೊತ್ತು ಸಾಗಲಿದೆ.

ಸುಪ್ರಿಂ ಕೋರ್ಟ್ ಆದೇಶದ ಪ್ರಕಾರ ಅರ್ಜುನನಿಗೆ 60 ವರ್ಷ ಮೀರಿರುವುದರಿಂದ ಅಂಬಾರಿ ಹೊರುವ ಅವಕಾಶವಿಲ್ಲ. ಅಭಿಮನ್ಯು ಜೊತೆಗೆ ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿವೆ.
ಇನ್ನು ನವರಾತ್ರಿಯ ಎಲ್ಲ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರನ್ನು ಕಾರ್ಯಕ್ರಮ ನೀಡಲು ಆಹ್ವಾನಿಸಲಾಗುವುದು. ಎಲ್ಲ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 07:35 pm
HK News Staffer
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm