ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm