ಬ್ರೇಕಿಂಗ್ ನ್ಯೂಸ್
24-11-21 12:28 pm HK news Desk ಕರ್ನಾಟಕ
ಬಂಟ್ವಾಳ, ನ.24: ಕಾರಿಂಜೇಶ್ವರ ದೇವಸ್ಥಾನ ಸುತ್ತಮುತ್ತ ನಡೆಯುವ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುತ್ತೇವೆ ಎಂದು ಅಬ್ಬರಿಸಿದ್ದ ಹಿಂದು ಜಾಗರಣ ವೇದಿಕೆ ಮುಖಂಡ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರಿಂಜೇಶ್ವರ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈಗ ಚುನಾವಣೆ ಇದೆ, ಹಾಗೆಂದು ಅಧಿಕಾರಿಗಳು ಬಿಝಿ ಇದ್ದಾರೆ ಅಂದ್ರೆ ಓಕೆ. ಡಿಸೆಂಬರ್ 10 ರ ನಂತರ ಹತ್ತು ದಿನದ ಸಮಯ ಕೊಡುತ್ತೇವೆ. ಆನಂತರವೂ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ನಮ್ಮ ಜಾಗರಣ ವೇದಿಕೆ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆತನ ಕೊರಳು ಪಟ್ಟಿ ಹಿಡಿಯಲಿದ್ದಾರೆ. ಅದೇ ರೀತಿ ಗಣಿಗಾರಿಕೆ ಮುಚ್ಚಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಉಸ್ತುವಾರಿ ಸಚಿವ ಮತ್ತು ಶಾಸಕನೂ ರಾಜಿನಾಮೆ ಕೊಟ್ಟು ಹೋಗಲಿ ಎಂದು ಆಕ್ರೋಶದ ಮಾತುಗಳನ್ನಾಡಿ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳು ಪಟ್ಟಿ ಹಿಡಿಯುತ್ತೇವೆಂದು ಬಹಿರಂಗ ಬೆದರಿಕೆ ಹಾಕಿದ ವಿಚಾರದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಪುಂಜಾಲುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವುದಾಗಿ ಬಹಿರಂಗ ಬೆದರಿಕೆ ಹಾಕಿದ ಆರೋಪದಲ್ಲಿ ಜಗದೀಶ್ ಕಾರಂತ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bantwal Illegal mining surrounding Karneshwar Temple, HJV Jagadish Karanth makes open threat to DC Mangalore. Says we will enter your office and catch hold of your collar in case you don't stop this illegal activity.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am