ಬ್ರೇಕಿಂಗ್ ನ್ಯೂಸ್
24-11-21 05:44 pm HK news Desk ಕರ್ನಾಟಕ
ಕಲಬುರ್ಗಿ, ನ.24: ಅತ್ತ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮನೆ ಬಾಗಿಲು ಬಡಿಯುತ್ತಿದ್ದರೆ, ಇತ್ತ ಭ್ರಷ್ಟ ಅಧಿಕಾರಿ ಮನೆಯ ಬಾತ್ ರೂಮಿನಲ್ಲಿ ಹಣದ ಕಂತೆಯನ್ನು ಒಂದೊಂದೇ ನೀರಿನ ಪೈಪಿಗೆ ತೂರಿಸುತ್ತಿದ್ದ.. ಹೌದು.. ತನ್ನ ಕೆಲಸದ ಉದ್ದಕ್ಕೂ ಜನರ ದುಡ್ಡನ್ನು ಕಿತ್ತು ತಿಂದು ಗುಡ್ಡೆ ಹಾಕಿದ್ದ ಪರಮ ಭ್ರಷ್ಟ ಅಧಿಕಾರಿಯೊಬ್ಬನ ಅಸಲಿ ಬಣ್ಣ ನೋಡಿ ಎಸಿಬಿ ಅಧಿಕಾರಿಗಳೇ ದಿಗಿಲುಗೊಂಡಿದ್ದಾರೆ.
ಭಾರೀ ಆಸ್ತಿ ಗಳಿಸಿರುವ ಆರೋಪದಲ್ಲಿ ಕಲಬುರ್ಗಿಯ ಲೋಕೋಪಯೋಗಿ ಇಲಾಖೆಯ ಜೆಇ ಆಗಿರುವ ಶಾಂತಗೌಡನ ಬಿರಾದಾರ ಎಂಬ ಅಧಿಕಾರಿಯ ಮನೆಗೆ ಹೊಕ್ಕಿದ್ದ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ಆಗಿದ್ದಾರೆ. ಪೈಪ್, ಬಕೇಟ್ ನಲ್ಲಿ ತುಂಬಿದ್ದ ಕಂತೆ ಕಂತೆ ನೋಟಿನ ರಾಶಿಯನ್ನೇ ಪತ್ತೆ ಹಚ್ಚಿದ್ದಾರೆ. ಮನೆಯ ಬಾತ್ ರೂಮಿನ ಪೈಪ್ ನಲ್ಲಿ ತೂರಿಸಿದ್ದ ನಗದನ್ನು ಹೊರ ತೆಗೆಯಲು ಅಧಿಕಾರಿಗಳು ಹರಸಾಹಸ ಮಾಡಿದ್ದಾರೆ. ಪ್ಲಂಬರನ್ನು ಕರೆಸಿ, ಬಾತ್ ರೂಮಿನಿಂದ ಮನೆಯ ಹೊರಗೆ ಚಾಚಿಕೊಂಡಿದ್ದ ಪೈಪನ್ನು ಕಟ್ ಮಾಡಿ ತೆಗೆಯುತ್ತಿದ್ದಾಗ ನೋಟಿನ ಕಂತೆಗಳೇ ಹೊರಬಿದ್ದಿವೆ. ಅಧಿಕಾರಿಗಳ ಕಣ್ಣಿಗೆ ಬೀಳದಂತೆ ಸ್ವತಃ ಲಂಚಕೋರ ಅಧಿಕಾರಿಯೇ ಪೈಪ್ ಒಳಗೆ ಲಂಚದ ಹಣವನ್ನು ತೂರಿಸಿದ್ದು ಎಲ್ಲವನ್ನೂ ಎಸಿಬಿ ಸಿಬಂದಿ ಹೊರತೆಗೆದಿದ್ದಾರೆ.

ನೆಲಕ್ಕೆ ಹುದುಗಿದ್ದ ಪೈಪನ್ನೂ ಅಗೆದು ತೆಗೆದಿದ್ದು ಕೊನೆಗೆ 13 ಲಕ್ಷ 50 ಸಾವಿರ ಹಣ ಪಿವಿಸಿ ಪೈಪ್ ನಲ್ಲೇ ಪತ್ತೆಯಾಗಿದೆ. ಅಲ್ಲಲ್ಲಿ ಪತ್ತೆಯಾದ ಹಣದ ಕಂತೆಗಳನ್ನು ಬಕೆಟ್ ನಲ್ಲಿ ತುಂಬಿಸಿ ಅಧಿಕಾರಿಗಳು ಲೆಕ್ಕ ಮಾಡಿದ್ದಾರೆ. ಒಟ್ಟು ಶಾಂತಗೌಡನ ಮನೆಯಲ್ಲಿ ಬರೋಬ್ಬರಿ 55 ಲಕ್ಷ ನಗದು ಪತ್ತೆಯಾಗಿದೆ. ಆರಂಭದಿಂದಲೂ ಎಸಿಬಿ ತನಿಖೆಗೆ ಸಹಕರಿಸದೆ ನಾಟಕವಾಡಿದ ಅಧಿಕಾರಿ, ಕಪಾಟು, ಬೀರುವಿನ ಕೀಯನ್ನು ಕೊಡದೆ ಸತಾಯಿಸಿದ್ದಾನೆ.
ಇದಲ್ಲದೆ, ಶಾಂತಗೌಡ ಬಿರಾದಾರ ಕಲಬುರಗಿಯ ವಿವಿಧ ಕಡೆ ಆಸ್ತಿ ಹೊಂದಿದ್ದಾನೆ. ಗುಬ್ಬಿ ಕಾಲೋನಿಯಲ್ಲಿ ಒಂದು ಭವ್ಯ ಬಂಗಲೆ, ಕಲಬುರಗಿಯ ಬಡೇಪುರದಲ್ಲಿ ಇನ್ನೊಂದು ಭವ್ಯ ಬಂಗಲೆ ಪತ್ತೆಯಾಗಿದೆ. ಕಲಬುರಗಿ ನಗರದ ಬ್ರಹ್ಮಪೂರ ಬಡವಾಣೆ ಕೋಟನೂರ್ ಡಿ ಬಡವಾಣೆಯಲ್ಲಿ ತಲಾ ಎರಡು ಸೈಟ್ ಹೊಂದಿರುವುದು ಪತ್ತೆಯಾಗಿದೆ.

ಯಡ್ರಾಮಿ ತಾಲ್ಲೂಕಿನ ಹಂಗರಗಾ ಗ್ರಾಮದಲ್ಲಿ 25 ಎಕರೆ ಫಾರ್ಮ್ ಹೌಸ್, 10 ಎಕರೆ ಜಮೀನು ಸೇರಿ ಒಟ್ಟು 35 ಎಕರೆ ಜಮೀನು ಸದ್ಯಕ್ಕೆ ಪತ್ತೆಯಾಗಿದೆ. ಹಂಗಾರಮಗ ಗ್ರಾಮದ ಫಾರ್ಮ್ ನಲ್ಲಿ ಮತ್ತೆರಡು ಭವ್ಯ ಬಂಗಲೆ ಇರುವುದನ್ನೂ ಪತ್ತೆ ಮಾಡಿದ್ದಾರೆ.
ಹಂಗಾಮಿ ನೌಕರನಾಗಿ ಸೇರಿದ್ದ ಲಂಚಕೋರ !
1992 ರಲ್ಲಿ ಕುಲಬುರ್ಗಿ ಜಿಲ್ಲಾ ಪಂಚಾಯ್ತಿ ಆಳಂದ ವಿಭಾಗದಲ್ಲಿ ಕಿರಿಯ ಅಭಿಯಂತರ ಹುದ್ದೆಗೆ ಹಂಗಾಮಿ ನೌಕರನಾಗಿ ಸೇರ್ಪಡೆಯಾಗಿದ್ದ ಶಾಂತಗೌಡ ತನ್ನ ಕರ್ತವ್ಯದ ಉದ್ದಕ್ಕೂ ಭ್ರಷ್ಟಾಚಾರದಿಂದ ಕೂಡಿಟ್ಟ ಹಣಕ್ಕೆ ಲೆಕ್ಕ ಇರಲಿಕ್ಕಿಲ್ಲ. 2000 ಇಸವಿಯಲ್ಲಿ ಖಾಯಂ ನೌಕರನಾಗಿ ಸೇರಿದ್ದ ಶಾಂತಗೌಡ ಕಲಬುರಗಿ ಜಿಲ್ಲೆಯ ಆಳಂದ, ವಿಜಯಪುರ ಜಿಲ್ಲೆಯ ಆಲಮೇಲ, ಬೆಳಗಾವಿ, ಜೇವರ್ಗಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಕರ್ತವ್ಯ ಪೂರೈಸಿದ್ದಾನೆ. ಕಡಿಮೆ ಅವಧಿಯಲ್ಲಿ ಕೂಡಿಹಾಕಿದ ಆಸ್ತಿಯನ್ನು ಅಧಿಕಾರಿಗಳು ಲೆಕ್ಕ ಹಾಕುತ್ತಿದ್ದಾರೆ. ಕಡತ ಪರಿಶೀಲನೆ ಮುಂದುವರಿದಿದ್ದು ಇನ್ನು ಬ್ಯಾಂಕಿನಲ್ಲಿರುವ ಆಸ್ತಿ ಪಾಸ್ತಿಯ ಬಗ್ಗೆ ಇನ್ನೂ ಹೊರಬಂದಿಲ್ಲ.
A search of the resident of a Junior Engineer in the Public Works Department (PWD) in Kalaburagi yielded assets, including cash, that were said to be disproportionate to the known source of the officer’s income.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm